ಶಿವಮೊಗ್ಗ ಲೈವ್.ಕಾಂ | HOSANAGARA NEWS | 24 ಜೂನ್ 2020
ಜೂಸ್ ಕಬ್ಬು ವ್ಯಾಪಾರಿ ಜೊತೆಗೆ ಮದುವೆ ಬೀಗರ ಊಟಕ್ಕೆ ಹೋಗಿದ್ದ ಯುವಕನಿಗೂ ಕರೋನ ಸೋಂಕು ಕಾಣಿಸಿಕೊಂಡಿದೆ. ಸ್ನೇಹಿತನಿಗೆ ಕರೋನ ಸೋಂಕು ತಗುಲಿರುವ ವಿಚಾರ ತಿಳಿದು ಯುವಕ ಸ್ವಯಂ ಪ್ರೇರಿತವಾಗಿ ಪರೀಕ್ಷೆಗೆ ಒಳಪಟ್ಟಿದ್ದರು.
ರಿಪ್ಪನ್ಪೇಟೆ ಸಮೀಪದ ಗ್ರಾಮವೊಂದರ ಜೂಸ್ ಕಬ್ಬು ವ್ಯಾಪಾರಿಗೆ ಕರೋನ ಸೋಂಕು ತಗುಲಿತ್ತು. ಈ ವಿಚಾರ ತಿಳಿಯುತ್ತಿದ್ದಂತೆ, ಅವರೊಂದಿಗೆ ಮದುವೆ ಬೀಗರ ಊಟಕ್ಕೆ ಹೋಗಿದ್ದ ಸ್ವಯಂ ಪ್ರೇರಿತವಾಗಿ ಹೋಗಿ ತಪಾಸಣೆಗೆ ಒಳಪಟ್ಟಿದ್ದರು.
ಊರು ಸೀಲ್ ಡೌನ್, ಕುಟುಂಬದ ಮೇಲೆ ನಿಗಾ
ಯುವಕನಿಗೆ ಕರೋನ ಸೋಂಕು ತಗುಲಿರುವುದು ದೃಢವಾಗುತ್ತಿದ್ದಂತೆ, ಹೊಸನಗರದ ಪಾಶೆಟ್ಟಿಕೊಪ್ಪ ಗ್ರಾಮವನ್ನು ಸೀಲ್ ಡೌನ್ ಮಾಡಲಾಗಿದೆ. ಈ ಗ್ರಾಮದಲ್ಲಿ 82 ಮನೆಗಳಿವೆ. ಗ್ರಾಮದಲ್ಲಿರುವವರ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ. ಯುವಕನ ಕುಟುಂಬದವರ ಆರೋಗ್ಯದ ಮೇಲೆ ಹೆಚ್ಚಿನ ನಿಗಾ ವಹಿಸಲಾಗಿದೆ.
ತಾಲೂಕು ಪಂಚಾಯಿತಿ ಇಓ ಪ್ರವೀಣ್ ಕುಮಾರ್, ಟಿಹೆಚ್ಓ ಡಾ.ಸುರೇಶ್, ಉಪ ತಹಶೀಲ್ದಾರ್ ಪ್ರದೀಪ್, ಕಂದಾಯ ನಿರೀಕ್ಷಕ ಇನಾಯತ್, ಪಿಡಿಒ ಮುರುಗೇಶ್ ಸೀಲ್ ಡೌನ್ ಪರಿಶೀಲನೆ ನಡೆಸಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200