ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SAGARA NEWS | 1 ಅಕ್ಟೋಬರ್ 2020
ಬೆಳೆ ನಾಶ ಮಾಡುತ್ತಿದ್ದ 36 ಮಂಗಗಳಿಗೆ ವಿಷವುಣಿಸಿ ಹತ್ಯೆ ಮಾಡಿದ ಐವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಸಾಗರ ತಾಲೂಕು ಆನಂದಪುರ ಸಮೀಪದ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಪ್ಪಳಿ ಕಾಡಿನಲ್ಲಿ ಘಟನೆ ನಡೆದಿದೆ.

ಐವರು ಅರೆಸ್ಟ್ ಆಗಿದ್ದು ಹೇಗೆ?
ಮಂಗಗಳಿಗೆ ವಿಷವುಣಿಸಿ ಹತ್ಯೆ ಮಾಡಿ, ಅವುಗಳ ಮೃತದೇಹವನ್ನು ಎಸೆಯಲು ಆಗಮಿಸಿದ್ದ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬಂಧಿತರಿಂದ ಒಂದು ಕಾರು, ಟಾಟಾ ಏಸ್ ವಾಹನವನ್ನು ವಶಕ್ಕೆ ಪಡೆಯಲಾಗಿದೆ.

ಯಾರನ್ನೆಲ್ಲ ಬಂಧಿಸಲಾಗಿದೆ?
ತ್ಯಾಗರ್ತಿಯ ವಿಶ್ವನಾಥ್ (32), ದಸ್ತಗಿರ್ ಸಾಬ್ (40), ಲಾವಿಗೆರೆ ಲಂಬೋದರ (25), ಅಭಿಷೇಕ್ (24), ದಾವಣಗೆರೆಯ ಸಂಜೀವ್ ಶೇಟ್ ಎಂಬುವವರನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಜಾಮೀನಿನ ಮೇಲೆ ಐವರನ್ನು ಬಿಡುಗಡೆ ಮಾಡಲಾಗಿದೆ.

ಮರಣೋತ್ತರ ಪರೀಕ್ಷೆ, ಅಂತ್ಯಕ್ರಿಯೆ
ಮರಿಗಳು ಸೇರಿದಂತೆ ವಿವಿಧ ವಯೋಮಾನದ 36 ಮಂಗಗಳಿಗೆ ವಿಷವುಣಿಸಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಎಲ್ಲ ಮಂಗಗಳ ಮರೋಣತ್ತರ ಪರೀಕ್ಷೆ ನಡೆಸಿದರು. ರಾಷ್ಟ್ರೀಯ ಹೆದ್ದಾರಿ 206ರ ಸ್ವಲ್ಪ ದೂರದಲ್ಲಿ ಅರಣ್ಯ ಇಲಾಖೆ ಸಮೂಹಿಕ ಅಂತ್ಯಕ್ರಿಯೆ ನೆರವೇರಿಸಿತು.
ಸಾಗರ ಎಸಿಎಫ್ ಶ್ರೀಧರ್, ರಾಜೇಶ್ ನಾಯ್ಕ, ಚೋರಡಿ ವಿಭಾಗದ ಆರ್ಎಫ್ಓ ಮೋಹನ್, ಅರಣ್ಯಾಧಿಕಾರಿಗಳಾದ ಇಸ್ಮಾಯಿಲ್, ರಾಘವೇಂದ್ರ ತಗ್ಗಿನ್, ಮಂಜುನಾಥ, ಚಂದ್ರಶೇಖರ್, ಎಂ.ಆರ್.ಅಶೋಕ್, ಭದ್ರೇಶ್, ಶಿವನಗೌಡ ಬಿರಾದಾರ್, ಸಂತೋಷ್ ನಾಯ್ಕ, ಪ್ರದೀಪ್ ಅವರು ಕಾರ್ಯಾಚರಣೆಯಲ್ಲಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಸಿಗಂದೂರು ಲಾಂಚ್ ವಿಚಾರ, ಸರ್ಕಾರ ನಿರ್ಧಾರ ಪ್ರಕಟಿಸುವಂತೆ ಆಗ್ರಹ, ಏನಂದ್ರು ಪ್ರಸನ್ನ ಕೆರೆಕೈ?

- ಇವತ್ತು ಏಕಾದಶಿ; ಶುಭ, ಅಶುಭ ಸಮಯಗಳು ಯಾವಾಗಿದೆ? ಇಂದಿನ ಪಂಚಾಂಗ

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 27 ಮಾರ್ಚ್ 2026

- ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್ ಜಾಮ್

- ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

About The Editor
ನಿತಿನ್ ಆರ್.ಕೈದೊಟ್ಲು
















