ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 9 FEBRUARY 2024
SAGARA : 4.75 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಸುಸಜ್ಜಿತ ವಕೀಲರ ಭವನ ಫೆ.11ರಂದು ಲೋಕಾರ್ಪಣೆಗೊಳ್ಳಲಿದೆ. ರಾಜ್ಯ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರು ವಕೀಲರ ಭವನ ಉದ್ಘಾಟನೆ ಮಾಡಲಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಕೀಲರ ಸಂಘದ ಉಪಾಧ್ಯಕ್ಷ ಹೆಚ್.ಆರ್.ಶ್ರೀಧರ್, ನ್ಯಾಯಮೂರ್ತಿ ಆರ್.ದೇವದಾಸ್ ಅಧ್ಯಕ್ಷ ವಹಿಸಲಿದ್ದಾರೆ. ಸಚಿವರಾದ ಹೆಚ್.ಕೆ.ಪಾಟೀಲ್, ಮಧು ಬಂಗಾರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಬೇಳೂರು ಗೋಪಾಲಕೃಷ್ಣ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಮಹಾಲೇಖನಾಧಿಕಾರಿ ಕೆ.ಎಸ್.ಭರತ್ ಕುಮಾರ್, ವಕೀಲರ ಪರಿಷತ್ ಸದಸ್ಯ ಪಿ.ಪಿ.ಹೆಗ್ಡೆ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ತಿಳಿಸಿದರು.
ಹಿರಿಯ ನ್ಯಾಯವಾದಿ ರಾಘವೇಂದ್ರ ಮಾತನಾಡಿ, ಮೂರು ಅಂತಸ್ತಿನ ಕಟ್ಟಡದ ಮೇಲ್ಭಾಗದಲ್ಲಿ ಸಭಾ ಭವನ ನಿರ್ಮಿಸಲಾಗಿದೆ. ಗುಣಮಟ್ಟದ ಕಾಮಗಾರಿ ನಡೆಸಲಾಗಿದೆ. ವಕೀಲರ ಭವನ ನಿರ್ಮಾಣಕ್ಕೆ ವಕೀಲರ ಸಂಘದ ಹಿಂದಿನ ಕಾರ್ಯಕಾರಿ ಸಮಿತಿಗಳು, ಈಗಿನ ಸಮಿತಿ ಪ್ರಮುಖ ಪಾತ್ರ ವಹಿಸಿದೆ ಎಂದು ತಿಳಿಸಿದರು.
ವಕೀಲರಾದ ಹೆಚ್.ಎನ್.ದಿವಾಕರ್, ರಮೇಶ್, ವಿ.ಶಂಕರ್, ಸಿ.ಪಿ.ಸದಾಶಿವ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ – ವಿದ್ಯುತ್ ದರ ಪರಿಷ್ಕರಣಕ್ಕೆ ಜನರಿಂದ ಅಭಿಪ್ರಾಯ ಸಂಗ್ರಹ | ನೀರಿನ ಕಂದಾಯಕ್ಕೆ ವಿಶೇಷ ಕೌಂಟರ್ – ಫಟಾಫಟ್ ನ್ಯೂಸ್
LATEST NEWS
- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

- ಶಿವಮೊಗ್ಗ ವಿದ್ಯಾನಗರದಲ್ಲಿ ಅದ್ಧೂರಿ ಜಾತ್ರೆ, ಯಾವ್ಯಾವ ದಿನ ಏನೇನು ನಡೆಯಲಿದೆ? ಹೇಗಿದೆ ಸಿದ್ಧತೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? | 9 ಮಾರ್ಚ್ 2026

- ಮಾರಿಕಾಂಬ ದೇವಸ್ಥಾನ ಸಮಿತಿಗೆ ನೂತನ ನಿರ್ದೇಶಕರ ಆಯ್ಕೆ, ಯಾರೆಲ್ಲ ಆಯ್ಕೆಯಾಗಿದ್ದಾರೆ?

- ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಏ.14ರವರೆಗೆ ಗಡುವು ನೀಡಿದ ಭದ್ರಾವತಿ ರಾಜು, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು





