ಶಿವಮೊಗ್ಗ ಲೈವ್.ಕಾಂ | SAGARA NEWS | 17 ಅಕ್ಟೋಬರ್ 2021
ಮನೆಯ ಸದಸ್ಯರು ಮತಾಂತರವಾಗುತ್ತಿದ್ದಾರೆ ಎಂದು ಆರೋಪಿಸಿ, ಸ್ಥಳೀಯರು ಮತ್ತು ಹಿಂದೂ ಪರ ಸಂಘಟನೆ ಕಾರ್ಯಕರ್ತರು ಮನೆ ಮುಂದೆ ಜಮಾಯಿಸಿದ್ದರು. ಇದರಿಂದ ಕೆಲ ಕಾಲ ಗೊಂದಲದ ಪರಿಸ್ಥಿತಿ ನಿರ್ಮಾಣವಾಗಿತ್ತು.
ಸಾಗರ ಪಟ್ಟಣದ ಗೋಪಾಲಗೌಡ ನಗರದ ಮನೆಯೊಂದರಲ್ಲಿ ಘಟನೆ ಸಂಭವಿಸಿದೆ. ಮತಾಂತರ ಮಾಡಲಾಗುತ್ತಿದೆ ಎಂದು ಆರೋಪಿಸಿ ಸ್ಥಳೀಯರು, ಹಿಂದೂ ಸಂಘಟನೆ ಕಾರ್ಯಕರ್ತರು ಜಮಾಯಿಸಿದ್ದರು.
ಮನೆಯವರು ಶಿಲುಬೆ ಧರಿಸಿ, ಮರಿಯಾ ಮಾತೆಯ ಪೂಜೆ ಮಾಡುತ್ತಿದ್ದಾರೆ. ಮೆಷಿನರಿಗಳು ಹಣದಾಸೆಗೆ ಹಿಂದೂಗಳ ಮತಾಂತರ ಮಾಡುತ್ತಿದ್ದಾವೆ ಎಂದು ಹಿಂದೂ ಸಂಘಟನೆ ಕಾರ್ಯಕರ್ತರು ಆರೋಪಿಸಿದರು. ಗೋಪಾಲಗೌಡ ನಗರದಲ್ಲಿ ಕೆಲಕಾಲ ಗೊಂದಲ ಉಂಟಾಗಿತ್ತು. ವಿಡಿಯೋ ವರದಿ ಇಲ್ಲದೆ