SHIVAMOGGA LIVE NEWS | 6 OCTOBER 2023
SAGARA : ಗ್ರಾಮೀಣ ಭಾಗದಲ್ಲಿ ಪೊಲೀಸ್ ಗಸ್ತು (Patrol) ಹೆಚ್ಚಳ ಮಾಡಬೇಕು, ಗನ್ ಪರ್ಮಿಷನ್ ನವೀಕರಿಸಬೇಕು, ಬಂದೂಕು ತರಬೇತಿ ನೀಡಬೇಕು ಎಂದು ಒತ್ತಾಯಿಸಿ ಸಾಗರ ಪ್ರಾಂತ್ಯ ಅಡಿಕೆ ಬೆಳೆಗಾರರ ಸಂಘದ ವತಿಯಿಂದ ಡಿವೈಎಸ್ಪಿಯನ್ನು ಭೇಟಿಯಾಗಿ ಮನವಿ ಸಲ್ಲಿಸಲಾಯಿತು.
ಅಡಿಕೆ ಬೆಳೆಗಾರರ ಮನವಿಯೇನು?
ಸಾಗರ ಭಾಗದಲ್ಲಿ ಒಂಟಿ ಮನೆಗಳು ಹೆಚ್ಚು. ಅಡಿಕೆ ಬೆಳೆಗಾರರು ತಮ್ಮ ಬೆಳೆ ರಕ್ಷಣೆ ಮಾಡಿಕೊಳ್ಳಬೇಕಿದೆ. ತಮ್ಮ ಕುಟುಂಬದ ಹಿರಿಯರಿಂದ ಗನ್ ಪರವಾನಗಿಯನ್ನು ತಮಗೆ ವರ್ಗಾಯಿಸಿಕೊಡುವಂತೆ ಅರ್ಜಿ ಸಲ್ಲಿಸಿ ಹಲವು ವರ್ಷಗಳಾಗಿವೆ. ಈತನಕ ಅದು ಆಗಿಲ್ಲ. ಸಾಗರ, ಹೊಸನಗರ, ಸೊರಬ ಭಾಗದ ಬೆಳೆಗಾರರಿಗೆ ಬಂದೂಕು ತರಬೇತಿ ನೀಡಬೇಕು. ಇನ್ನು, ಗ್ರಾಮೀಣ ಭಾಗದಲ್ಲಿ ಪೊಲೀಸ್ ಗಸ್ತು (Patrol) ಹೆಚ್ಚಳ ಮಾಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಯಿತು.
ಇದನ್ನೂ ಓದಿ- ಬಸ್ ಹತ್ತಿ ಸೀಟ್ನಲ್ಲಿ ಕುಳಿತು ಬ್ಯಾಗ್ನತ್ತ ನೋಡಿದ ಮಹಿಳೆಗೆ ಕಾದಿತ್ತು ಆಘಾತ, ಠಾಣೆಗೆ ದೌಡು
ಅಡಿಕೆ ಬೆಳೆಗಾರರ ಮನವಿಗೆ ಡಿವೈಎಸ್ಪಿ ಗೋಪಾಲಕೃಷ್ಣ ಟಿ.ನಾಯ್ಕ್ ಪೂರಕವಾಗಿ ಸ್ಪಂದಿಸಿದರು. ಸಾಗರ ಪ್ರಾಂತ್ಯ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ವ.ಶಂ.ರಾಮಚಂದ್ರ ಭಟ್, ಅನಿಲ್ ಒಡೆಯರ್, ತಿರುಮಲ ಮಾವಿನಕುಳಿ, ಚಿಪ್ಪಳಿ ಗುರುಪ್ರಸಾದ್, ಲೋಕನಾಥ್ ಬಿಳಿಸಿರಿ, ದಿನೇಶ್ ಬರದವಳ್ಳಿ, ಈಳಿ ಶ್ರೀಧರ್, ಸುಮಂತ್, ಎಂ.ಬಿ.ರಮೇಶ್, ಸಿ.ಗುರುಮೂರ್ತಿ, ಬಿ.ಟಿ.ಮಂಜುನಾಥ್ ಸೇರಿದಂತೆ ಹಲವರು ಇದ್ದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200