ಅಡಿಕೆ ಬೆಳೆಗಾರರಿಂದ ಸಾಗರ ಡಿವೈಎಸ್‌ಪಿ ಭೇಟಿ, 3 ಪ್ರಮುಖ ಬೇಡಿಕೆ ಈಡೇರಿಸುವಂತೆ ಮನವಿ, ಏನದು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 6 OCTOBER 2023

SAGARA : ಗ್ರಾಮೀಣ ಭಾಗದಲ್ಲಿ ಪೊಲೀಸ್‌ ಗಸ್ತು (Patrol) ಹೆಚ್ಚಳ ಮಾಡಬೇಕು, ಗನ್‌ ಪರ್ಮಿಷನ್‌ ನವೀಕರಿಸಬೇಕು, ಬಂದೂಕು ತರಬೇತಿ ನೀಡಬೇಕು ಎಂದು ಒತ್ತಾಯಿಸಿ ಸಾಗರ ಪ್ರಾಂತ್ಯ ಅಡಿಕೆ ಬೆಳೆಗಾರರ ಸಂಘದ ವತಿಯಿಂದ ಡಿವೈಎಸ್‌ಪಿಯನ್ನು ಭೇಟಿಯಾಗಿ ಮನವಿ ಸಲ್ಲಿಸಲಾಯಿತು.

ಅಡಿಕೆ ಬೆಳೆಗಾರರ ಮನವಿಯೇನು?

ಸಾಗರ ಭಾಗದಲ್ಲಿ ಒಂಟಿ ಮನೆಗಳು ಹೆಚ್ಚು. ಅಡಿಕೆ ಬೆಳೆಗಾರರು ತಮ್ಮ ಬೆಳೆ ರಕ್ಷಣೆ ಮಾಡಿಕೊಳ್ಳಬೇಕಿದೆ. ತಮ್ಮ ಕುಟುಂಬದ ಹಿರಿಯರಿಂದ ಗನ್‌ ಪರವಾನಗಿಯನ್ನು ತಮಗೆ ವರ್ಗಾಯಿಸಿಕೊಡುವಂತೆ ಅರ್ಜಿ ಸಲ್ಲಿಸಿ ಹಲವು ವರ್ಷಗಳಾಗಿವೆ. ಈತನಕ ಅದು ಆಗಿಲ್ಲ. ಸಾಗರ, ಹೊಸನಗರ, ಸೊರಬ ಭಾಗದ ಬೆಳೆಗಾರರಿಗೆ ಬಂದೂಕು ತರಬೇತಿ ನೀಡಬೇಕು. ಇನ್ನು, ಗ್ರಾಮೀಣ ಭಾಗದಲ್ಲಿ ಪೊಲೀಸ್‌ ಗಸ್ತು (Patrol) ಹೆಚ್ಚಳ ಮಾಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಯಿತು.

ಇದನ್ನೂ ಓದಿ- ಬಸ್‌ ಹತ್ತಿ ಸೀಟ್‌ನಲ್ಲಿ ಕುಳಿತು ಬ್ಯಾಗ್‌ನತ್ತ ನೋಡಿದ ಮಹಿಳೆಗೆ ಕಾದಿತ್ತು ಆಘಾತ, ಠಾಣೆಗೆ ದೌಡು

ಅಡಿಕೆ ಬೆಳೆಗಾರರ ಮನವಿಗೆ ಡಿವೈಎಸ್‌ಪಿ ಗೋಪಾಲಕೃಷ್ಣ ಟಿ.ನಾಯ್ಕ್‌ ಪೂರಕವಾಗಿ ಸ್ಪಂದಿಸಿದರು. ಸಾಗರ ಪ್ರಾಂತ್ಯ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ವ.ಶಂ.ರಾಮಚಂದ್ರ ಭಟ್‌, ಅನಿಲ್‌ ಒಡೆಯರ್‌, ತಿರುಮಲ ಮಾವಿನಕುಳಿ, ಚಿಪ್ಪಳಿ ಗುರುಪ್ರಸಾದ್‌, ಲೋಕನಾಥ್‌ ಬಿಳಿಸಿರಿ, ದಿನೇಶ್‌ ಬರದವಳ್ಳಿ, ಈಳಿ ಶ್ರೀಧರ್, ಸುಮಂತ್‌, ಎಂ.ಬಿ.ರಮೇಶ್‌, ಸಿ.ಗುರುಮೂರ್ತಿ, ಬಿ.ಟಿ.ಮಂಜುನಾಥ್‌ ಸೇರಿದಂತೆ ಹಲವರು ಇದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 6, 2023

Leave a Comment