ಸಾಗರದಲ್ಲಿ 21 ಕ್ವಿಂಟಾಲ್ ಅಡಕೆ ಕದ್ದವರ ಬಳಿ ಸಿಕ್ತು 23 ಕ್ವಿಂಟಾಲ್ ಅಡಕೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 10 ಮಾರ್ಚ್ 2022

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಮನೆ ಬಳಿ ಒಣಗಲು ಹಾಕಿದ್ದ ಅಡಕೆ ಕಳ್ಳತನ ಮಾಡಿದ್ದ ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಲಾಗಿದೆ. 23 ಕ್ವಿಂಟಾಲ್ ಅಡಕೆಯನ್ನು ವಶಕ್ಕೆ ಪಡೆಯಲಾಗಿದೆ.

Shimoga Nanjappa Hospital

ಭಟ್ಕಳದ ಹಬೀಬ್ ಖಾನ್ ಅಲಿಯಾಸ್ ಅಪ್ಪು (24), ಮಹಮ್ಮದ್ ಮರ್ದನ್ (21), ರುಮಾನ್ (20) ಎಂಬುವವರನ್ನು ಬಂಧಿಸಲಾಗಿದೆ. ಫೈರೋಜ್ ಖಾನ್ (22) ಎಂಬಾತನನ್ನು ಮಾ.4ರಂದು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಕಳುವಾಗಿದ್ದು 21 ಕ್ವಿಂಟಾಲ್, ಸಿಕ್ಕಿದ್ದು 23 ಕ್ವಿಂಟಾಲ್

ತಲವಾಟ ಗ್ರಾಮದಲ್ಲಿ ರೈತರೊಬ್ಬರು ಮಾರ್ಚ್ 2ರಂದು ತಮ್ಮ ಮನೆ ಬಳಿ ಒಣಗಿಸಲು ಹಾಕಿದ್ದ 21 ಕ್ವಿಂಟಾಲ್ ಅಡಕೆ ಕಳ್ಳತನವಾಗಿತ್ತು. ಈ ಸಂಬಂಧ ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರಿಗೆ ನಾಲ್ವರು ಅಡಕೆ ಕಳ್ಳರು ಸಿಕ್ಕಿಬಿದ್ದಿದ್ದಾರೆ.

ಇದನ್ನೂ ಓದಿ | ಕಣದಲ್ಲಿ ಒಣಗಿಸಲು ಹಾಕಿದ್ದ ಸಿಪ್ಪೆಗೋಟು ಅಡಕೆ ರಾತ್ರೋರಾತ್ರಿ ನಾಪತ್ತೆ

ವಿಚಾರಣೆ ವೇಳೆ ಸಾಗರ ಗ್ರಾಮಾಂತರ ಠಾಣೆ ವ್ಯಾಪ್ತಿಯ ಒಟ್ಟು ನಾಲ್ಕು ಅಡಕೆ ಕಳ್ಳತನ ಪ್ರಕರಣವನ್ನು ಕಳ್ಳರು ಬಾಯಿಬಿಟ್ಟಿದ್ದಾರೆ. ಇವರಿಂದ ಒಟ್ಟು 4.70 ಲಕ್ಷ ರೂ. ಮೌಲ್ಯದ 23 ಕ್ವಿಂಟಾಲ್ ಸಿಪ್ಪೆಗೋಟು ಅಡಕೆ ವಶಕ್ಕೆ ಪಡೆಯಲಾಗಿದೆ. ಕೃತ್ಯಕ್ಕೆ ಬಳಸಿದ 1 ಬೊಲೇರೊ ಪಿಕಪ್ ವಾಹನವನ್ನು ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಈ ಮೇಲ್ – shivamoggalive@gmail.com

WhatsApp Number – 7411700200

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment