SHIVAMOGGA LIVE NEWS | 3 NOVEMBER 2022
SAGARA | ಸಾಹಿತಿ ಕೆ.ಎಸ್.ಭಗವಾನ್ ವಿರುದ್ಧ ಸಾಗರ ಜೆಎಂಎಫ್ ಸಿ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರಂಟ್ (arrest warrant) ಜಾರಿಗೊಳಿಸಿದೆ. ‘ರಾಮ ಮಂದಿರ ಏಕೆ ಬೇಡ?’ ಕೃತಿಗೆ ಸಂಬಂಧಪಟ್ಟಂತೆ ಸಾಹಿತಿ ಭಗವಾನ್ ವಿರುದ್ಧ ಸಂಘ ಪರಿವಾದ ಕಾರ್ಯಕರ್ತ ಇಕ್ಕೇರಿಯ ಮಹಾಬಲೇಶ್ವರ ಎಂಬುವರು ಸಾಗರ ನ್ಯಾಯಾಲಯದಲ್ಲಿ ಖಾಸಗಿ ಪ್ರಕರಣ ದಾಖಲಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಲಯ ಭಗವಾನ್ ವಿರುದ್ಧ ಐಪಿಸಿ ಸೆಕ್ಷನ್ 295(ಎ) ಅಡಿ ಧಾರ್ಮಿಕ ಭಾವನೆಗೆ ಧಕ್ಕೆ ಸಂಬಂಧ ಕ್ರಿಮಿನಲ್ ಪ್ರಕರಣ ದಾಖಲು ಮಾಡಿ ನ.2 ರಂದು ಖುದ್ದು ನ್ಯಾಯಾಲಯಕ್ಕೆ ಹಾಜರಾಗುವಂತೆ ಮೈಸೂರು ಎಸ್ಪಿ ಮೂಲಕ ಸಮನ್ಸ್ ಜಾರಿ ಮಾಡಿತ್ತು.
ಕ್ಲಿಕ್ ಮಾಡಿ ಇದನ್ನೂ ಓದಿ | ಶಿವಮೊಗ್ಗದ ಗಾಂಧಿ ಬಜಾರ್ ಸುತ್ತಮುತ್ತ ಡಿಸಿ, ಎಸ್.ಪಿ ನೇತೃತ್ವದಲ್ಲಿ 3 ಗಂಟೆ ದಿಢೀರ್ ಕಾರ್ಯಾಚರಣೆ
ಸಮನ್ಸ್ ಖುದ್ದು ಜಾರಿಯಾಗಿದ್ದರೂ ಕೆ.ಎಸ್.ಭಗವಾನ್ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ, ಇದರಿಂದ ನ್ಯಾಯಾಧೀಶ ಶ್ರೀಶೈಲ ಭೀಮಸೇನ್ ಭಗಾಡೆ ಅವರು ಜಾಮೀನು ರಹಿತ ಬಂಧನ ವಾರಂಟ್ (arrest warrant) ಆದೇಶ ಮಾಡಿದ್ದಾರೆ.
ಸಾಗರ ಪೇಟೆ ಪೊಲೀಸ್ ಠಾಣೆಗೆ ಆದೇಶ ಜಾರಿ ಮಾಡುವಂತೆ ನ್ಯಾಯಾಲಯ ಆದೇಶ ಮಾಡಿದೆ. ದೂರುದಾರರ ಪರ ಕೆ.ವಿ.ಪ್ರವೀಣಕುಮಾರ್ ವಾದಿಸಿದ್ದರು.
ADVERTISEMENT (arrest warrant)
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.