Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ನಗರಸಭೆಯಲ್ಲಿ ರಾದ್ಧಾಂತ, ಸಾಗರದಲ್ಲಿ ನೀರು ಪೂರೈಕೆ, ಕಸ ಸಂಗ್ರಹ ಸ್ಥಗಿತ, ಈತನಕ ಏನೇನೆಲ್ಲ ಆಗಿದೆ?

ನಗರಸಭೆಯಲ್ಲಿ ರಾದ್ಧಾಂತ, ಸಾಗರದಲ್ಲಿ ನೀರು ಪೂರೈಕೆ, ಕಸ ಸಂಗ್ರಹ ಸ್ಥಗಿತ, ಈತನಕ ಏನೇನೆಲ್ಲ ಆಗಿದೆ?

01/12/2022 3:01 PM
ನಿತಿನ್‌ ಕೈದೊಟ್ಲು

SHIVAMOGGA LIVE NEWS | 1 DECEMBER 2022

ಸಾಗರ : ಪಟ್ಟಣದಲ್ಲಿ ನೀರು ಸರಬರಾಜು ಇಲ್ಲ. ಮನೆ ಮನೆಯಿಂದ ಕಸ ಸಂಗ್ರಹವು ಸ್ಥಗಿತ. ನ್ಯಾಯಕ್ಕಾಗಿ ಪಟ್ಟು ಹಿಡಿದ ಪೌರ ಕಾರ್ಮಿಕರು, ನಗರಸಭೆ ಸಿಬ್ಬಂದಿ. (attack on commissioner)

ಇವತ್ತಿನ ಎಲ್ಲ NEWS
» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

shivamogga live news whatsappa number

Shimoga nanjappa hospital

ಸಾಗರ ನಗರ ಸಭೆ ಪೌರಾಯುಕ್ತರ ಮೇಲಿನ ಹಲ್ಲೆ ಖಂಡಿಸಿ, ಸಿಬ್ಬಂದಿ ಮತ್ತು ಪೌರ ಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಹಲ್ಲೆಕೋರರನ್ನು ಕೂಡಲೆ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ. ಇದೆ ಕಾರಣಕ್ಕೆ ಸಾಗರ ಪಟ್ಟಣದಲ್ಲಿ ಇವತ್ತು ಕಸ ಸಂಗ್ರಹ ಮಾಡದೆ, ನೀರು ಪೂರೈಕೆಯನ್ನು ಸ್ಥಗಿತಗೊಳಿಸಿ ಮುಷ್ಕರ ನಡೆಸಲಾಗುತ್ತಿದೆ.

(attack on commissioner)

ಪೌರಾಯುಕ್ತರ ಮೇಲೆ ಹಲ್ಲೆಯಾಗಿದ್ದೇಕೆ?

LIC-HOME-NEW-ADVTಹಣ್ಣಿನ ಅಂಗಡಿ ತೆರವು ವಿಚಾರ ಸಾಗರ ನಗರಸಭೆ ಆವರಣದಲ್ಲಿ ಹೈಡ್ರಾಮಾಗೆ ಕಾರಣವಾಗಿದೆ. ಪೌರಾಯುಕ್ತರ ಮೇಲೆಯೆ ಹಲ್ಲೆಯಾಗಿರುವ ಆರೋಪ ಕೇಳಿ ಬಂದಿದೆ. ಇದರಿಂದ ನಗರಸಭೆ ಅಧಿಕಾರಿಗಳು, ಸಿಬ್ಬಂದಿ ದಿಢೀರ್ ಪ್ರತಿಭಟನೆ ನಡೆಸಿದರು.

ಕೆನರಾ ಬ್ಯಾಂಕ್ ಮುಂಭಾಗ ಶಾಬಾಜ್ ಎಂಬುವವರಿಗೆ ಸೇರಿದ ಹಣ್ಣಿನ ಅಂಗಡಿ ತೆರವು ವಿಚಾರ ಪ್ರತಿಭಟನೆ, ನೂಕಾಟ ತಳ್ಳಾಟಕ್ಕೆ ಕಾರಣವಾಗಿದೆ.

(attack on commissioner)

ಹಣ್ಣು ಬೀದಿಗೆ, ಹಣ ನಾಪತ್ತೆ ಆರೋಪ

ಶಾಬಾಜ್ ಎಂಬುವವರು ಕೆನರಾ ಬ್ಯಾಂಕ್ ಮುಂಭಾಗ ಹಣ್ಣಿನ ಅಂಗಡಿ ನಡೆಸುತ್ತಿದ್ದರು. ಚರಂಡಿ ರಿಪೇರಿ ಕಾಮಗಾರಿ ಹಿನ್ನೆಲೆ ಹಣ್ಣಿನ ಗಾಡಿಗಳನ್ನು ತೆರವು ಮಾಡುವಂತೆ ನಗರಸಭೆ ಅಧಿಕಾರಿಗಳು ಸೂಚಿಸಿದ್ದರು ಎಂದು ಹೇಳಲಾಗುತ್ತಿದೆ. ಆದರೂ ಶಾಬಾಜ್ ಅಂಗಡಿ ತೆರವು ಮಾಡಿರಲಿಲ್ಲ. ರಿಪೇರಿ ಕಾರ್ಯ ಹಿನ್ನೆಲೆ ನಗರಸಭೆ ಅಧಿಕಾರಿಗಳೆ ಅಂಗಡಿ ತೆರವುಗೊಳಿಸಿದ್ದಾರೆ. ಈ ಸಂದರ್ಭ ನಗರಸಭೆ ಅಧಿಕಾರಿಗಳು, ಪೌರ ಕಾರ್ಮಿಕರು ಹಣ್ಣುಗಳನ್ನು ರಸ್ತೆಗೆ ಎಸೆದಿದ್ದಾರೆ. ಅಂಗಡಿಯಲ್ಲಿದ್ದ ಲಕ್ಷಾಂತರ ಮೌಲ್ಯದ ಹಣ್ಣು, ನಗದು ಹೊತ್ತೊಯ್ದಿದ್ದಾರೆ ಎಂದು ಶಾಬಾಜ್ ಆರೋಪಿಸಿದ್ದಾರೆ. ಆದರೆ ಇದನ್ನು ಪೌರಾಯುಕ್ತರು ಮತ್ತು ನಗರಸಭೆ ಸಿಬ್ಬಂದಿ ತಿರಸ್ಕರಿಸಿದ್ದಾರೆ.

Congress Protest in Sagara Nagara Sabhe

(attack on commissioner)

ಅಖಾಡಕ್ಕೆ ಧುಮುಕಿದ ಕಾಂಗ್ರೆಸ್

ಹಣ್ಣು ವ್ಯಾಪಾರಿಯ ಮೇಲೆ ನಗರಸಭೆ ಅಧಿಕಾರಿಗಳು, ಪೌರ ಕಾರ್ಮಿಕರು ದಬ್ಬಾಳಿಕೆ ನಡೆಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರಸಭೆಯ ಕಾಂಗ್ರೆಸ್ ಸದಸ್ಯರು, ಕೆಲವು ವ್ಯಾಪಾರಿಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಮನವಿ ಸಲ್ಲಿಸುವ ವೇಳೆ ನಗರಸಭೆ ಪೌರಾಯುಕ್ತ ಹೆಚ್.ಕೆ.ನಾಗಪ್ಪ ಅವರನ್ನು ಎಳೆದಾಡಿದ್ದಾರೆ ಎಂದು ಆರೋಪಿಸಲಾಗಿದೆ.

(attack on commissioner)

ಅಧಿಕಾರಿಗಳು, ಸಿಬ್ಬಂದಿಯಿಂದ ದಿಢೀರ್ ಪ್ರತಿಭಟನೆ

ಪೌರಾಯುಕ್ತ ಹೆಚ್.ಕೆ.ನಾಗಪ್ಪ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಅಧಿಕಾರಿಗಳು, ಸಿಬ್ಬಂದಿ ದಿಢೀರ್ ಪ್ರತಿಭಟನೆ ನಡೆಸಿದರು. ನಗರಸಭೆ ಸಿಬ್ಬಂದಿಯ ಪ್ರತಿಭಟನೆಗೆ ಬಿಜೆಪಿ ಬೆಂಬಲವಾಗಿ ನಿಂತಿತು. ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್ ಅವರ ನೇತೃತ್ವದಲ್ಲಿ ಬಿಜೆಪಿ ಸದಸ್ಯರು ನಗರಸಭೆ ಸಿಬ್ಬಂದಿ ಬೆಂಬಲಕ್ಕೆ ನಿಂತರು.

Sagara BJP and Nagara Sabhe Protest

ಪ್ರತಿಭಟನೆ ವೇಳೆ ಕುಸಿದು ಬಿದ್ದು ಸಾವು

ಪೌರಾಯುಕ್ತ ಹೆಚ್.ಕೆ.ನಾಗಪ್ಪ ಅವರ ಪರವಾಗಿ ಸಾಗರದ ಈಡಿಗ ಸಮುದಾಯದ ಮುಖಂಡರು https://chat.whatsapp.com/KChu2C1bGTM2v9HmZlfIkSಪ್ರತಿಭಟನೆ ನಡೆಸಿದರು. ಇದರಲ್ಲಿ ಭಾಗಿಯಾಗಿದ್ದ ಪೌರಾಯುಕ್ತ ಹೆಚ್.ಕೆ.ನಾಗಪ್ಪ ಅವರ ಸಹೋದರ ಗಣಪತಿ ಬರವಳ್ಳಿ (50) ಬುಧವಾರ ಸಂಜೆ ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಈ ಬೆಳವಣಿಗೆ ಬೆನ್ನಿಗೆ ಈಡಿಗ ಸಂಘದವರು ಗಣಪತಿ ಬರವಳ್ಳಿ ಪರವಾಗಿ ಮೌನಾಚರಣೆ ಮಾಡಿದರು. ಬಳಿಕ ಪ್ರತಿಭಟನೆಯನ್ನು ಕೈಬಿಟ್ಟರು.

ಮುಂದುವರೆದ ಪೌರ ಕಾರ್ಮಿಕರ ಪ್ರತಿಭಟನೆ

ಪೌರಾಯುಕ್ತರ ಮೇಲಿನ ಹಲ್ಲೆ ಖಂಡಿಸಿ ಪೌರ ಕಾರ್ಮಿಕರು, ನಗರಸಭೆ ಸಿಬ್ಬಂದಿ ಪ್ರತಿಭಟನೆ ಮುಂದುವರೆಸಿದ್ದಾರೆ. ಕಸ ಸಂಗ್ರಹ ಮಾಡುವ ವಾಹನಗಳನ್ನು ನಗರಸಭೆ ಆವರಣದಲ್ಲಿ ಸಾಲಾಗಿ ನಿಲ್ಲಿಸಿ, ಕೆಲಸ ಸ್ಥಗಿತಗೊಳಿಸಿ ಪೌರ ಕಾರ್ಮಿಕರು ಮುಷ್ಕರ ನಡೆಸುತ್ತಿದ್ದಾರೆ. ನಗರದಲ್ಲಿ ಕುಡಿಯುವ ನೀರು ಸರಬರಾಜು ವ್ಯತ್ಯಯವಾಗಿದೆ. ಪೌರಾಯುಕ್ತರ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮುಷ್ಕರ ನಿರತರು ಆಗ್ರಹಿಸಿದ್ದಾರೆ.

ALSO READ –  ಶಿವಮೊಗ್ಗದ ಖಾಸಗಿ ಆಸ್ಪತ್ರೆ ವೈದ್ಯ ನೇಣು ಬಿಗಿದು ಆತ್ಮಹತ್ಯೆ

Sagara nagara SAbhe

ನೌಕರರ ಸಂಘದಿಂದ ದೂರು

ಇನ್ನು, ಘಟನೆ ಸಂಬಂಧ ಪೌರ ಸೇವಾ ನೌಕರರ ಸಂಘದ ವತಿಯಿಂದ ಸಾಗರ ನಗರ ಠಾಣೆಗೆ ದೂರು ನೀಡಲಾಗಿದೆ. ಪೌರಾಯುಕ್ತರ ಕರ್ತವ್ಯಕ್ಕೆ ಅಡ್ಡಿ, ಕಚೇರಿಗೆ ನುಗ್ಗಿ ದಾಂಧಲೆ, ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಸಾಗರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Shimoga Nanjappa HOspital

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article Dr-Lolith-Commits-suicide-in-Shimoga ಶಿವಮೊಗ್ಗದ ಖಾಸಗಿ ಆಸ್ಪತ್ರೆ ವೈದ್ಯ ನೇಣು ಬಿಗಿದು ಆತ್ಮಹತ್ಯೆ
Next Article Dog-Attack-on-Child-in-Shimoga-PUrle ಶಿವಮೊಗ್ಗ ನಗರದಲ್ಲಿ ಬಾಲಕಿ ಮೇಲೆ ಬೀದಿ ನಾಯಿಗಳ ದಾಳಿ, ಮೆಗ್ಗಾನ್ ಆಸ್ಪತ್ರೆಗೆ ದಾಖಲು

ಇದನ್ನೂ ಓದಿ

-Linganamakki-Dam-General-Image
SAGARA

ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ 3.30 ಅಡಿ ಏರಿಕೆ, ಇವತ್ತು ಎಷ್ಟಿದೆ ಒಳ ಹರಿವು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
17/06/2025
tourists-visit-jog-falls.
SAGARA

ಮೈದುಂಬಿದ ಜೋಗ ಜಲಪಾತ, ವೈಭವ ಕಣ್ತುಂಬಿಕೊಳ್ಳಲು ವಾರದ ದಿನವು ಪ್ರವಾಸಿಗರ ದಂಡು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
16/06/2025
-Linganamakki-Dam-General-Image
SAGARA

ಲಿಂಗನಮಕ್ಕಿ ಜಲಾಶಯಕ್ಕೆ ಒಳ ಹರಿವು ಹೆಚ್ಚಳ, 24 ಗಂಟೆಯಲ್ಲಿ ನೀರಿನ ಮಟ್ಟ 2.65 ಅಡಿಯಷ್ಟು ಏರಿಕೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
16/06/2025
agumbe-ghat-road-during-rainy-season
HOSANAGARASAGARATHIRTHAHALLI

ಹೊಸನಗರ, ಸಾಗರದಲ್ಲಿ ಭಾರಿ ಮಳೆ, ಆಗುಂಬೆ ಭಾಗದಲ್ಲಿ ಬಿಡುವು ಕೊಡದ ವರ್ಷಧಾರೆ, ಎಲ್ಲೆಲ್ಲಿ ಜೋರು ಮಳೆಯಾಗ್ತಿದೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
16/06/2025
BREAKING-NEWS-GENERAL-IMAGE
HOSANAGARASAGARA

BREAKING NEWS – ಜೋರು ಮಳೆ, ಇವತ್ತು ಎರಡು ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
16/06/2025
Siganduru-Bridge-in-sagara-taluk
SAGARA

ಸಿಗಂದೂರು ಸೇತುವೆ ಬಳಿ ಗೇಟ್‌ ಸಿಬ್ಬಂದಿಗೆ ಮಚ್ಚು ತೋರಿಸಿದ ಧಾರವಾಡದ ಪ್ರವಾಸಿಗ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
11/06/2025
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?