ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಸಾಗರ: ಇಲ್ಲಿನ ಜೀವನ್ಮುಖಿ ಸಂಸ್ಥೆಯು ಮಹಿಳಾ ಉದ್ಯಮಿಗಳನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ನ. 15ರಂದು ಬೆಳಿಗ್ಗೆ 11ರಿಂದ ರಾತ್ರಿ 8ರವರೆಗೆ ಗಾಂಧಿ ಮೈದಾನದಲ್ಲಿ ಅವ್ವ ಮಹಿಳಾ ಮಹಾ ಸಂತೆ ಆಯೋಜಿಸಿದೆ ಎಂದು ಜೀವನ್ಮುಖಿ ಸಂಸ್ಥೆಯ ಎಂ.ವಿ.ಪ್ರತಿಭಾ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರತಿಭಾ, ಹೆಗ್ಗೋಡಿನ ಚರಕ ಸಂಸ್ಥೆಯ ಸಹಯೋಗದೊಂದಿಗೆ ಆಯೋಜಿಸಿರುವ ಈ ಸಂತೆಯಲ್ಲಿ ರಾಜ್ಯದ ವಿವಿಧ ಭಾಗಗಳ ಮಹಿಳಾ ಉದ್ಯಮಿಗಳು ಸಿದ್ಧಪಡಿಸಿರುವ ಗೃಹೋತ್ಪನ್ನಗಳು, ಕೈಮಗ್ಗದ ವಸ್ತುಗಳು, ಸ್ಥಳೀಯ ಸಾಂಪ್ರದಾಯಿಕ ತಿನಿಸುಗಳ ಪ್ರದರ್ಶನ ಮಾರಾಟವಿರುತ್ತದೆ ಎಂದು ತಿಳಿಸಿದರು.
ಚರಕ ಸಂಸ್ಥೆಯ ಉತ್ಪನ್ನಗಳನ್ನು ರಿಯಾಯಿತಿ ದರದಲ್ಲಿ ಪೂರೈಸಲಾಗುವುದು. ಇಕ್ರಾ ಸಂಸ್ಥೆಯ ಸಣ್ಣ ರೈತರು ಬೆಳೆದ ರಾಸಾಯನಿಕ ಮುಕ್ತ ದವಸ ಧಾನ್ಯಗಳನ್ನು ರೈತ ಮಹಿಳೆಯರು ಮಾರಾಟ ಮಾಡಲಿದ್ದಾರೆ. ಹಳೆಯ ರೇಷ್ಮೆ ಸೀರೆಗಳನ್ನು ಪಡೆದು ನಗದು ಹಣ ನೀಡುವ ವ್ಯವಸ್ಥೆ ಕೂಡ ಇರುತ್ತದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ಪದ್ಮಶ್ರೀ, ರಂಜಿನಿ, ಸರಿತಾ, ಸೌಮ್ಯಾ, ಮಮತಾ ಜೈನ್, ರೋಹಿಣಿ ಇದ್ದರು.
ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ಕೆಎಸ್ಆರ್ಟಿಸಿ ಬಸ್ ಚಾಲಕರಿಗೆ ಬಿಸಿ ಮುಟ್ಟಿಸಿದ ಟ್ರಾಫಿಕ್ ಪೊಲೀಸ್
LATEST NEWS
- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






