ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗದ ಲೈವ್.ಕಾಂ | SAGARA NEWS | 11 ಫೆಬ್ರವರಿ 2022
ಗೋವಾದಲ್ಲಿ ಚುನಾವಣೆ ಪ್ರಚಾರಕ್ಕೆ ಹೋಗುವ ಬದಲು ಫೆಬ್ರವರಿ 12ರಂದು ಧರ್ಮಸ್ಥಳದಲ್ಲಿ ಪ್ರಮಾಣ ಮಾಡಲು ತೆರಳುವುದಾಗಿ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ತಿಳಿಸಿದ್ದಾರೆ.
ತಮ್ಮ ಫೇಸ್ ಬುಕ್ ಖಾತೆಯಲ್ಲಿ ವಿಡಿಯೋ ಪ್ರಕಟಣೆ ಬಿಡುಗಡೆ ಮಾಡಿರುವ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಫೆ.12ರಂದು ಮಧ್ಯಾಹ್ನ 12 ಗಂಟೆಗೆ ಧರ್ಮಸ್ಥಳಕ್ಕೆ ಹೋಗುತ್ತಿರುವುದಾಗಿ ತಿಳಿಸಿದ್ದಾರೆ.
ಗೋವಾ ಪ್ರವಾಸ ರದ್ದು
ಮರಳು ದಂಧೆ ಮಾಡುವವರಿಂದ ಶಾಸಕ ಹರತಾಳು ಹಾಲಪ್ಪ ಅವರು ಹಣ ಪಡೆಯುತ್ತಿದ್ದಾರೆ. ಈ ಬಗ್ಗೆ ಧರ್ಮಸ್ಥಳದಲ್ಲಿ ಪ್ರಮಾಣ ಮಾಡಲು ಸಿದ್ಧ. ಅಲ್ಲದೆ ತಾವು ಶಾಸಕರಾಗಿದ್ದ ಅವಧಿಯಲ್ಲಿ ಮರಳು ದಂಧೆ ಮಾಡುವವರಿಂದ ಹಣ ಪಡೆದಿಲ್ಲ ಎಂದು ಪ್ರಮಾಣ ಮಾಡಲು ಸಿದ್ಧ ಎಂದು ಬೇಳೂರು ಗೋಪಾಲಕೃಷ್ಣ ಪುನರುಚ್ಚರಿಸಿದ್ದಾರೆ.
ಇದನ್ನೂ ಓದಿ | ಧರ್ಮಸ್ಥಳದಲ್ಲಿ ಆಣೆ ಮಾಡಲು ದಿನಾಂಕ ನಿಗದಿಪಡಿಸಿದ ಶಾಸಕ ಹಾಲಪ್ಪ
ಗೋವಾದಲ್ಲಿ ಫೆ.14ರಂದು ಚುನಾವಣೆ ನಡೆಯಲಿದೆ. ಫೆ.12ರ ಸಂಜೆವರೆಗೂ ಪ್ರಚಾರ ಕಾರ್ಯ ನಡೆಯಲಿದೆ. ಆದರೆ ಗೋವಾ ಪ್ರವಾಸವನ್ನು ರದ್ದು ಮಾಡಿ, ಧರ್ಮಸ್ಥಳಕ್ಕೆ ತೆರಳುವುದಾಗಿ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಸ್ಪಷ್ಟಪಡಿಸಿದ್ದಾರೆ.
ಇಲ್ಲಿ ಪೂರ್ತಿ ವಿಡಿಯೋ
LATEST NEWS
- ರೈಲಿಗೆ ತಲೆ ಕೊಟ್ಟು ಯುವಕ ಸಾವು, ತುರ್ತು ಬ್ರೇಕ್ ಹಾಕಿದ ಲೋಕೊ ಪೈಲೆಟ್

- ಇವತ್ತು ರಂಗ ಪಂಚಮಿ, ಈ ದಿನ ಯಾವ್ಯಾವ ಶುಭ ಸಮಯ ಎಷ್ಟೊತ್ತಿಗಿದೆ?

- ಶಿವಮೊಗ್ಗದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ಧಗಧಗ ಹೊತ್ತಿ ಉರಿದ ಮುಂಭಾಗ

- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

About The Editor
ನಿತಿನ್ ಆರ್.ಕೈದೊಟ್ಲು





