ಶಿವಮೊಗ್ಗದ ಲೈವ್.ಕಾಂ | SAGARA NEWS | 11 ಫೆಬ್ರವರಿ 2022
ಗೋವಾದಲ್ಲಿ ಚುನಾವಣೆ ಪ್ರಚಾರಕ್ಕೆ ಹೋಗುವ ಬದಲು ಫೆಬ್ರವರಿ 12ರಂದು ಧರ್ಮಸ್ಥಳದಲ್ಲಿ ಪ್ರಮಾಣ ಮಾಡಲು ತೆರಳುವುದಾಗಿ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ತಿಳಿಸಿದ್ದಾರೆ.
ತಮ್ಮ ಫೇಸ್ ಬುಕ್ ಖಾತೆಯಲ್ಲಿ ವಿಡಿಯೋ ಪ್ರಕಟಣೆ ಬಿಡುಗಡೆ ಮಾಡಿರುವ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಫೆ.12ರಂದು ಮಧ್ಯಾಹ್ನ 12 ಗಂಟೆಗೆ ಧರ್ಮಸ್ಥಳಕ್ಕೆ ಹೋಗುತ್ತಿರುವುದಾಗಿ ತಿಳಿಸಿದ್ದಾರೆ.
ಗೋವಾ ಪ್ರವಾಸ ರದ್ದು
ಮರಳು ದಂಧೆ ಮಾಡುವವರಿಂದ ಶಾಸಕ ಹರತಾಳು ಹಾಲಪ್ಪ ಅವರು ಹಣ ಪಡೆಯುತ್ತಿದ್ದಾರೆ. ಈ ಬಗ್ಗೆ ಧರ್ಮಸ್ಥಳದಲ್ಲಿ ಪ್ರಮಾಣ ಮಾಡಲು ಸಿದ್ಧ. ಅಲ್ಲದೆ ತಾವು ಶಾಸಕರಾಗಿದ್ದ ಅವಧಿಯಲ್ಲಿ ಮರಳು ದಂಧೆ ಮಾಡುವವರಿಂದ ಹಣ ಪಡೆದಿಲ್ಲ ಎಂದು ಪ್ರಮಾಣ ಮಾಡಲು ಸಿದ್ಧ ಎಂದು ಬೇಳೂರು ಗೋಪಾಲಕೃಷ್ಣ ಪುನರುಚ್ಚರಿಸಿದ್ದಾರೆ.
ಇದನ್ನೂ ಓದಿ | ಧರ್ಮಸ್ಥಳದಲ್ಲಿ ಆಣೆ ಮಾಡಲು ದಿನಾಂಕ ನಿಗದಿಪಡಿಸಿದ ಶಾಸಕ ಹಾಲಪ್ಪ
ಗೋವಾದಲ್ಲಿ ಫೆ.14ರಂದು ಚುನಾವಣೆ ನಡೆಯಲಿದೆ. ಫೆ.12ರ ಸಂಜೆವರೆಗೂ ಪ್ರಚಾರ ಕಾರ್ಯ ನಡೆಯಲಿದೆ. ಆದರೆ ಗೋವಾ ಪ್ರವಾಸವನ್ನು ರದ್ದು ಮಾಡಿ, ಧರ್ಮಸ್ಥಳಕ್ಕೆ ತೆರಳುವುದಾಗಿ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಸ್ಪಷ್ಟಪಡಿಸಿದ್ದಾರೆ.
ಇಲ್ಲಿ ಪೂರ್ತಿ ವಿಡಿಯೋ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200