ಸಾಗರ ಮಾರಿ ಜಾತ್ರೆಗು ಮೊದಲು ರಸ್ತೆ ಅಗಲೀಕರಣ ಪೂರ್ಣ, ಯಾವ್ಯಾವ ರಸ್ತೆ ಕುರಿತು MLA ಹೇಳಿದ್ದೇನು?

ನಿಮ್ಮ ಊರಿನ ಸುದ್ದಿಗಳನ್ನು ನಮಗೆ ವಾಟ್ಸಪ್ ಮಾಡಿ 7411700200

SHIVAMOGGA LIVE NEWS, 10 FEBRUARY 2025

ಸಾಗರ : ಇಲ್ಲಿನ ಆರ್‌.ಪಿ.ರಸ್ತೆಯಲ್ಲಿ (road) ಚರಂಡಿ ನಿರ್ಮಾಣ ಕಾಮಗಾರಿ ಕುರಿತು ಸಾರ್ವಜನಿಕರ ದೂರಿನ ಹಿನ್ನೆಲೆ ಶಾಸಕ, ಅರಣ್ಯ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭ ಸಾರ್ವಜನಿಕರಿಗೆ ತೊಂದರೆ ಅಗದಂತೆ ಶೀಘ್ರ ಮತ್ತು ಗುಣಮಟ್ಟದ ಕಾಮಗಾರಿ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

MLA-Beluru-Gopalakrishna-inspects-road-at-sagara

ಮಾರ್ಕೆಟ್‌ ರಸ್ತೆ ಮತ್ತು ಬಿ.ಹೆಚ್‌.ರಸ್ತೆಗಳಲ್ಲಿ ಗುಣಮಟ್ಟದ ಕಾಮಗಾರಿ ನಡೆಸಬೇಕು ಎಂದು ಗುತ್ತಿಗೆದಾರನಿಗೆ ಸೂಚಿಸಿದ್ದೇನೆ. ಮುಂದಿನ ಮಾರಿ ಜಾತ್ರೆ ಹೊತ್ತಿಗೆ ರಸ್ತೆ ಅಗಲೀಕರಣ ಕಾಮಗಾರಿ ಪೂರ್ಣಗೊಳ್ಳಲಿದೆ.

ಬೇಳೂರು ಗೋಪಾಲಕೃಷ್ಣ, ಶಾಸಕ

MLA-Beluru-Gopalakrishna-inspects-road-at-sagara

ತ್ವರಿತವಾಗಿ ನಡೆಯುತ್ತಿದೆ ಕಾಮಗಾರಿ

ಮಾರ್ಕೆಟ್‌ ರಸ್ತೆ ಅಗಲೀಕರಣಕ್ಕೆ 29 ಕೋಟಿ ರೂ. ಹಣ ಉಪ ವಿಭಾಗಾಧಿಕಾರಿ ಖಾತೆಯಲ್ಲಿದೆ. ಹಿಂದಿನ ಶಾಸಕರ ಅವಧಿಯಲ್ಲಿ ಒತ್ತಾಯಪೂರ್ವಕವಾಗಿ ಅಲ್ಲಿಯ ಸ್ಥಳೀಯರು ತೆರವಿಗೆ ಮುಂದಾಗಿದ್ದರಿಂದ ನ್ಯಾಯಾಲಯದ ಮೊರೆ ಹೋಗಿದ್ದರು. ಈಗ ರಸ್ತೆ ಅಗಲೀಕರಣಕ್ಕೆ ಜಾಗ ಬಿಟ್ಟುಕೊಡಲು ಒಪ್ಪಿಗೆ ನೀಡಿದ್ದಾರೆ. ಶೀಘ್ರ ಪರಿಹಾರದ ಹಣ ನೀಡಿ, ಕಾಮಗಾರಿ ಆರಂಭಿಸಲಾಗುತ್ತದೆ. ಬಿ.ಹೆಚ್‌.ರಸ್ತೆ ಅಗಲೀಕರಣ ಕಾಮಗಾರಿ ತ್ವರಿತವಾಗಿ ನಡೆಯುತ್ತಿದೆ ಎಂದು ಬೇಳೂರು ಗೋಪಾಲಕೃಷ್ಣ ತಿಳಿಸಿದರು.

ನಗರಸಭೆ ಪೌರಾಯುಕ್ತ ಹೆಚ್‌.ಕೆ.ನಾಗಪ್ಪ, ಡಿವೈಎಸ್‌ಪಿ ಗೋಪಾಲಕೃಷ್ಣ ನಾಯಕ್‌, ನಗರಸಭೆ ಸದಸ್ಯರಾದ ಗಣಪತಿ ಮಂಡಗಳಲೆ, ಮಧುಮಾಲತಿ, ಸೈಯದ್‌ ಜಾಕೀರ್‌ ಸೇರಿದಂತೆ ಹಲವರು ಇದ್ದರು.

ಇದನ್ನೂ ಓದಿ » ವಾಯುಸೇನೆ ಅಧಿಕಾರಿ ಮಂಜುನಾಥ್‌ ಪಂಚಭೂತಗಳಲ್ಲಿ ಲೀನ, ಇಲ್ಲಿದೆ ಇಡೀ ದಿನದ ಕಂಪ್ಲೀಟ್‌ ಮಾಹಿತಿ

ಹೆಚ್ಚಿನ Shimoga News, Shivamogga News ಮತ್ತು SAGARA ಸುದ್ದಿಗಳಿಗಾಗಿ ಶಿವಮೊಗ್ಗ ಲೈವ್ ನೋಡಿ.

© ಶಿವಮೊಗ್ಗ ಲೈವ್‌ : ಫೆಬ್ರವರಿ 10, 2025

Leave a Comment