ಜಮೀನು ಕೆಲಸ ಮುಗಿಸಿ ಮನೆಗೆ ಬಂದ ದಂಪತಿಗೆ ಕಾದಿತ್ತು ಆಘಾತ, ಆಗಿದ್ದೇನು?

ಸಾಗರ: ಮನೆಯೊಂದರ ಬಾಗಿಲಿನ ಲಾಕ್‌ ಮುರಿದು ₹2,25,000 ಮೌಲ್ಯದ ನಗದು, ಚಿನ್ನ, ಬೆಳ್ಳಿಯ ಆಭರಣ ಕಳವು ಮಾಡಲಾಗಿದೆ. ಸಾಗರ ತಾಲ್ಲೂಕು ಹಲಸಿನಘಟ್ಟ ಹುಳೆಗಾರು ಗ್ರಾಮದ ವೆಂಕಟರಮಣ ಎಂಬುವವರ ಮನೆಯಲ್ಲಿ ಘಟನೆ ನಡೆದಿದೆ.

ವೆಂಕಟರಮಣ ಮತ್ತು ಜಾನಕಮ್ಮ ದಂಪತಿ ಮನೆಯ ಬಾಗಿಲಿಗೆ ಬೀಗ ಹಾಕಿ ಜಮೀನಿಗೆ ಹೋಗಿದ್ದರು. ಈ ವೇಳೆ ಕೃತ್ಯ ನಡೆದಿದೆ. ಸಂಜೆ ವಾಪಸ್ ಬಂದು ನೋಡಿದಾಗ ಮನೆಯ ಗೇಟ್‌ ತೆರೆದಿತ್ತು. ಮನೆಯ ಬಾಗಿಲಿನ ಬೀಗ ಮುರಿಯಲಾಗಿತ್ತು.

Crime-News-General-Image

ಏನೇನೆಲ್ಲ ಕಳ್ಳತನವಾಗಿದೆ?

ಬೀರುವಿನಲ್ಲಿದ್ದ ₹70,000 ನಗದು, ಉಂಗುರಗಳು, ಚೈನ್, ಕಿವಿಯೋಲೆ ಹಾಗೂ ಜುಮುಕಿ ಸೇರಿ ಸುಮಾರು ₹1,50,000 ಮೌಲ್ಯದ ವಿವಿಧ ಬಂಗಾರದ ಆಭರಣಗಳು ಮತ್ತು ₹5,000 ಮೌಲ್ಯದ ಬೆಳ್ಳಿಯ ಆಭರಣಗಳು ಕಳ್ಳತನವಾಗಿವೆ. ಇವುಗಳ ಒಟ್ಟು ಮೌಲ್ಯ ₹2,25,000 ಎಂದು ಅಂದಾಜಿಸಲಾಗಿದೆ.

ಘಟನೆ ಸಂಬಂಧ ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ