ಶಿವಮೊಗ್ಗ ಲೈವ್.ಕಾಂ | 18 ಡಿಸೆಂಬರ್ 2018
ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿ ಹೊಡೆದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅತೀ ವೇಗವೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.
ಸಾಗರದ ಆಕಾಶ್ (21), ಅಣಲೆಕೊಪ್ಪದ ಲೋಹಿತ್ (21) ಮೃತಪಟ್ಟವರು. ಸಾಗರ ತಾಲೂಕಿನ ತಾಳಗುಪ್ಪ ಸಮೀಪದ ಮರತ್ತೂರು ಬಳಿ ಘಟನೆ ನಡೆದಿದೆ.
ಜೋಗದಿಂದ ಆಲ್ಟೋ ಕಾರಿನಲ್ಲಿ ಸಾಗರಕ್ಕೆ ಮರಳುವಾಗ, ಚಾಲಕನ ನಿಯಂತ್ರಣ ತಪ್ಪಿ, ಕಾರು ಮರಕ್ಕೆ ಗುದ್ದಿದೆ. ಅಪಘಾತದ ರಭಸಕ್ಕೆ ಕಾರು ನುಜ್ಜುಗುಜ್ಜಾಗಿದೆ. ಇನ್ನು, ಗಂಭೀರವಾಗಿ ಗಾಯಗೊಂಡಿದ್ದ ಆಕಾಶ್ ಮತ್ತು ಲೋಹಿತ್, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಕರೆ ಮಾಡಿ | 9964634494
ಈ ಮೇಲ್ | [email protected]