ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಸಾಗರ: ಕಾರು ಮತ್ತು ಬಸ್ ಮುಖಾಮುಖಿ ಡಿಕ್ಕಿಯಾಗಿದ್ದು (collision) ದಂಪತಿ ಗಾಯಗೊಂಡಿದ್ದಾರೆ. ಸಾಗರ ತಾಲೂಕು ಕಾಸ್ಪಾಡಿಯಲ್ಲಿ ಕಳೆದ ರಾತ್ರಿ ಘಟನೆ ಸಂಭವಿಸಿದೆ.
ಸಿದ್ದೇಶ್ವರ ಮತ್ತು ಅವರ ಪತ್ನಿ ತಲೆಗೆ ಗಂಭೀರ ಪೆಟ್ಟಾಗಿದೆ. ಅವರನ್ನು ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಾರಿನಲ್ಲಿದ್ದ ಇಬ್ಬರು ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ.
ಹೇಗಾಯ್ತು ಘಟನೆ?
ಬಸ್ಸು ಮಣಿಪಾಲದಿಂದ ಸಾಗರಕ್ಕೆ ತೆರಳುತ್ತಿತ್ತು. ಕಾರು ಸಾಗರದ ಕಡೆಯಿಂದ ದಾವಣಗೆರೆಗೆ ತೆರಳುತ್ತಿತ್ತು. ಕಾಸ್ಪಾಡಿ ಬಳಿ ಎರಡು ವಾಹನಗಳು ಮುಖಾಮುಖಿ ಡಿಕ್ಕಿಯಾಗಿವೆ. ಘಟನೆಯಲ್ಲಿ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಬಸ್ಸಿನ ಒಂದು ಬದಿಗೆ ಹಾನಿಯಾಗಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಚಾಕು ಇರಿತ, ವ್ಯಕ್ತಿಗೆ ಗಂಭೀರ ಗಾಯ, ಎಲ್ಲಿ? ಹೇಗಾಯ್ತು ಘಟನೆ?
ದಾರಿಯಲ್ಲಿ ತೆರಳುತ್ತಿದ್ದವರು ಮತ್ತು ಸ್ಥಳೀಯರು ಕಾರಿನಲ್ಲಿದ್ದವರನ್ನು ರಕ್ಷಿಸಿ ಮೂಲಕ ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಬಸ್ಸಿನಲ್ಲಿ ಕಡಿಮೆ ಸಂಖ್ಯೆ ಪ್ರಯಾಣಿಕರು ಇದ್ದರು. ಯಾರಿಗು ಯಾವುದೇ ಸಮಸ್ಯೆ ಆಗಿಲ್ಲ ಎಂದು ತಿಳಿದು ಬಂದಿದೆ.
LATEST NEWS
- ಶಿವಮೊಗ್ಗಕ್ಕೆ ಡಿಜಿಪಿ ಅಲೋಕ್ ಕುಮಾರ್, ಕೇಂದ್ರ ಕಾರಾಗೃಹಕ್ಕೆ ಭೇಟಿ

- ಶಿವಮೊಗ್ಗದಲ್ಲಿ ರೈಲಿಗೆ ಸಿಲುಕಿದ ವ್ಯಕ್ತಿ ಸಾವು, ಎರಡು ಭಾಗವಾದ ದೇಹ

- ಒಂದು ಮೆಸೇಜ್, ಶಿವಮೊಗ್ಗದ ವ್ಯಕ್ತಿಯ ಬ್ಯಾಂಕ್ ಖಾತೆಯಿಂದ ₹6.50 ಲಕ್ಷ ಮಾಯ, ಏನಿತ್ತು ಮೆಸೇಜ್ನಲ್ಲಿ?

- ಸಂಸದ ರಾಘವೇಂದ್ರ ಕಾರಿಗೆ ಮತ್ತೊಂದು ಕಾರು ಡಿಕ್ಕಿ, ಆಗಿದ್ದೇನು?

- ಅರಬಿಳಚಿ ದುರಂತ, ಭದ್ರಾ ನಾಲೆಯಲ್ಲಿ ಎರಡನೇ ಮೃತದೇಹ ಪತ್ತೆ

About The Editor
ನಿತಿನ್ ಆರ್.ಕೈದೊಟ್ಲು





