ಮರಕ್ಕೆ ಕಾರು ಡಿಕ್ಕಿಯಾಗಿ ಕಾಂಗ್ರೆಸ್‌ ಮುಖಂಡ ಸಾವು, ಇನ್ನಿಬ್ಬರಿಗೆ ಗಾಯ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 17 MAY 2023

ANANDAPURA : ರಸ್ತೆ ಪಕ್ಕದ ಮರಕ್ಕೆ ಕಾರು (Car) ಡಿಕ್ಕಿಯಾಗಿ ಕಾಂಗ್ರೆಸ್‌ ಮುಖಂಡ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಮತ್ತಿಬ್ಬರು ಗಾಯಗೊಂಡಿದ್ದು, ಈ ಪೈಕಿ ಒಬ್ಬನಿಗೆ ಗಂಭೀರ ಗಾಯವಾಗಿದೆ.

Car-Mishap-near-anandapura-congress-leader-dies

ಸಾಗರ ತಾಲೂಕು ಆನಂದಪುರ ಸಮೀಪ ಅಂಬ್ಲಿಗೊಳ ಬಳಿ ಘಟನೆ ಸಂಭವಿಸಿದೆ. ಕಾಂಗ್ರೆಸ್‌ ಮುಖಂಡ ತುರುಗೋಡು ನಾಗರಾಜ ಗೌಡ (55) ಮೃತಪಟ್ಟಿದ್ದಾರೆ.

WATCH VIDEO

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

ಶಿಕಾರಿಪುರದಿಂದ ಮಾರುತಿ ಸ್ವಿಫ್ಟ್‌ ಕಾರಿನಲ್ಲಿ (Car) ತಮ್ಮೂರಿಗೆ ಹಿಂತಿರುಗುತ್ತಿದ್ದರು. ಈ ವೇಳೆ ನಿಯಂತ್ರಣ ತಪ್ಪಿದ ಕಾರು ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದಿದೆ. ತುರುಗೋಡು ನಾಗರಾಜ ಗೌಡ ಅವರು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಇನ್ನಿಬ್ಬರನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಪೈಕಿ ಒಬ್ಬರಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ – ಲಾರಿ ಚಾಲಕನ ತಲೆಗೆ ಕ್ರಿಕೆಟ್‌ ಬ್ಯಾಟ್‌ನಿಂದ ಹೊಡೆದ ಯುವಕರು, ಮೆಗ್ಗಾನ್‌ ಆಸ್ಪತ್ರೆಗೆ ದಾಖಲು

ಆನಂದಪುರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment