ಸಾಗರದಲ್ಲಿ ಲಾರಿ, ಕಾರು ಪಲ್ಟಿ, ಅಪಘಾತಕ್ಕೆ ಕಾರಣ ಹಾವು, ಏನಿದು ಪ್ರಕರಣ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಸಾಗರ : ರಸ್ತೆಯಲ್ಲಿ ಕಾರಿಗೆ ಅಡ್ಡಲಾಗಿ ಬಂದ ಹಾವನ್ನು (Snake) ತಪ್ಪಿಸುವ ಭರದಲ್ಲಿ ಚಾಲಕ ಎದುರಿಗೆ ಬಂದ ಲಾರಿಗೆ ಡಿಕ್ಕಿ ಹೊಡಿಸಿದ್ದಾನೆ. ಘಟನೆಯಲ್ಲಿ ಲಾರಿ ಪಲ್ಟಿಯಾಗಿ ಶುಂಠಿ ಚೀಲಗಳು ಕೆಳಗೆ ಬಿದ್ದಿವೆ.

ಇದನ್ನೂ ಓದಿ » ತೀರ್ಥಹಳ್ಳಿ ಬಾಲಕ ಸಾವು ಪ್ರಕರಣ, ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಆದೇಶ

ಸಾಗರ ತಾಲೂಕಿನ ಭೀಮನೇರಿ ಸಮೀಪ ಘಟನೆ ಸಂಭವಿಸಿದೆ. ಸಾಗರದಿಂದ ಶುಂಠಿ ತುಂಬಿಕೊಂಡು ಹುಬ್ಬಳ್ಳಿಗೆ ಹೋಗುತ್ತಿದ್ದ ಲಾರಿ ಮತ್ತು ಹುಬ್ಬಳಿ ಕಡೆಯಿಂದ ಬರುತ್ತಿದ್ದ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ.

ಹಾವನ್ನು (Snake)  ತಪ್ಪಿಸಲು ಹೋಗಿ ಕಾರಿನ ಚಾಲಕ ಎದುರು ಬರುತ್ತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆಸಿದ್ದಾನೆ. ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಲಾರಿ ಚಾಲಕ ರಸ್ತೆ ಪಕ್ಕಕ್ಕೆ ತೆಗೆದುಕೊಂಡಾಗ ಲಾರಿ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಶುಂಠಿಚೀಲಗಳು ಕೆಳಗುರುಳಿವೆ. ಲಾರಿ ಮತ್ತು ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.

car-and-truck-mishap-due-to-snake-at-bheemaneri-in-sagara

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment