ಸಾಗರ : ರಸ್ತೆಯಲ್ಲಿ ಕಾರಿಗೆ ಅಡ್ಡಲಾಗಿ ಬಂದ ಹಾವನ್ನು (Snake) ತಪ್ಪಿಸುವ ಭರದಲ್ಲಿ ಚಾಲಕ ಎದುರಿಗೆ ಬಂದ ಲಾರಿಗೆ ಡಿಕ್ಕಿ ಹೊಡಿಸಿದ್ದಾನೆ. ಘಟನೆಯಲ್ಲಿ ಲಾರಿ ಪಲ್ಟಿಯಾಗಿ ಶುಂಠಿ ಚೀಲಗಳು ಕೆಳಗೆ ಬಿದ್ದಿವೆ.
ಇದನ್ನೂ ಓದಿ » ತೀರ್ಥಹಳ್ಳಿ ಬಾಲಕ ಸಾವು ಪ್ರಕರಣ, ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಆದೇಶ
ಸಾಗರ ತಾಲೂಕಿನ ಭೀಮನೇರಿ ಸಮೀಪ ಘಟನೆ ಸಂಭವಿಸಿದೆ. ಸಾಗರದಿಂದ ಶುಂಠಿ ತುಂಬಿಕೊಂಡು ಹುಬ್ಬಳ್ಳಿಗೆ ಹೋಗುತ್ತಿದ್ದ ಲಾರಿ ಮತ್ತು ಹುಬ್ಬಳಿ ಕಡೆಯಿಂದ ಬರುತ್ತಿದ್ದ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ.
ಹಾವನ್ನು (Snake) ತಪ್ಪಿಸಲು ಹೋಗಿ ಕಾರಿನ ಚಾಲಕ ಎದುರು ಬರುತ್ತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆಸಿದ್ದಾನೆ. ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಲಾರಿ ಚಾಲಕ ರಸ್ತೆ ಪಕ್ಕಕ್ಕೆ ತೆಗೆದುಕೊಂಡಾಗ ಲಾರಿ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಶುಂಠಿಚೀಲಗಳು ಕೆಳಗುರುಳಿವೆ. ಲಾರಿ ಮತ್ತು ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200