
ಶಿವಮೊಗ್ಗ ಲೈವ್.ಕಾಂ | SAGARA | 1 ಮೇ 2020
ವೈದ್ಯರ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದ ಹಿನ್ನೆಲೆ ಯುವಕನೊಬ್ಬನ ವಿರುದ್ಧ ಸಾಗರದಲ್ಲಿ ಪ್ರಕರಣ ದಾಖಲಾಗಿದ್ದು, ಆತನನ್ನು ಬಂಧಿಸಲಾಗಿದೆ. ಇಲ್ಲಿನ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಘಟನೆ ನಡೆದಿದೆ.
ವೈದ್ಯರನ್ನು ನಿಂದಿಸಿದ್ಯಾರು? ಘಟನೆಗೇನು ಕಾರಣ?
ಸಾಗರ ಪಟ್ಟಣದ ಸಮೀರ್ ಎಂಬಾತ ತನ್ನ ಸಹೋದರನನ್ನು ಆಸ್ಪತ್ರೆಗೆ ಕರೆತಂದಿದ್ದ. ಸಹೋದರನ ಕಾಲಿಗೆ ಗಾಯವಾಗಿದ್ದು, ತುರ್ತು ಚಿಕಿತ್ಸೆ ನೀಡಬೇಕು ಎಂದು ಸಮೀರ್ ವೈದ್ಯರನ್ನು ಒತ್ತಾಯಿಸಿದ. ಈ ವೇಳೆ ಕೀಲು ಮತ್ತು ಮೂಳೆ ತಜ್ಞ ಡಾ.ಪರಪ್ಪ ಅವರು ಕರೋನ ತಪಾಸಣೆಯಲ್ಲಿ ನಿರತವಾಗಿದ್ದರು. ಹಾಗಾಗಿ ಸರದಿಯಲ್ಲಿ ಬರುವಂತೆ ಸಮೀರ್ಗೆ ಸೂಚಿಸಿದರು.
ಇದರಿಂದ ಆಕ್ರೋಶಗೊಂಡ ಸಮೀರ್ ವೈದ್ಯರನ್ನು ನಿಂದಿಸಿದ್ದಾನೆ ಎಂದು ಹೇಳಲಾಗುತ್ತಿದೆ. ಈ ಸಂಬಂಧ ಸಾಗರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಹಿನ್ನೆಯಲ್ಲಿ ಸಮೀರ್ನನ್ನು ಬಂಧಿಸಲಾಗಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200