ಸಾಗರ : ಕಾಡು ಹಂದಿ ಬೇಟೆಯಾಡಿ (Hunters) ಮಾಂಸ ಹಂಚಿಕೊಳ್ಳುತ್ತಿದ್ದ ಮೂವರ ವಿರುದ್ಧ ಅರಣ್ಯ ಇಲಾಖೆ ಸಿಬ್ಬಂದಿ ಪ್ರಕರಣ ದಾಖಲಿಸಿದ್ದಾರೆ.
ತಾಲ್ಲೂಕಿನ ಬಾಳೆಗುಂಡಿ ಗ್ರಾಮದಲ್ಲಿ ಬೇಟೆಯಾಡಿದ್ದ ಕಾಡು ಹಂದಿ ಮಾಂಸವನ್ನು ಗ್ರಾಮದ ಕೆರೆ ದಂಡೆಯ ಮೇಲೆ ಹಂಚಿಕೊಳ್ಳುತ್ತಿದ್ದಾಗ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ನಡೆಸಿದ್ದು ಮೂವರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.
ಆರೋಪಿಗಳನ್ನು ಪ್ರಭಾಕರ್, ಗಣಪತಿ, ಅಣ್ಣಪ್ಪ ಎಂದು ಗುರುತಿಸಲಾಗಿದೆ. ಸ್ಥಳದಲ್ಲಿ ದೊರಕಿದ ನಾಲ್ಕೂವರೆ ಕೆ.ಜಿ. ಕಾಡು ಹಂದಿ ಮಾಂಸ ವಶಪಡಿಸಿಕೊಳ್ಳಲಾಗಿದೆ. ಉಪ ವಲಯ ಅರಣ್ಯಾಧಿಕಾರಿ ಕಿರಣ್, ವಲಯ ಅರಣ್ಯಾಧಿಕಾರಿ ಅಣ್ಣಪ್ಪ, ಸಿಬ್ಬಂದಿ ಸುರೇಶ್, ಬಸವರಾಜ್, ಸುನೀತಾ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಇದನ್ನೂ ಓದಿ » ತೀರ್ಥಹಳ್ಳಿಯಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ, ಸವಾರ ಆಸ್ಪತ್ರೆಗೆ

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200