SHIVAMOGGA LIVE NEWS | CRIME | 19 ಏಪ್ರಿಲ್ 2022
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಬಸ್ಸಿನಲ್ಲಿ ಯುವತಿಯೊಬ್ಬಳನ್ನು ಪೀಡಿಸುತ್ತಿದ್ದವನ ವಿರುದ್ಧ ಪ್ರಕರಣ ದಾಖಲಾಗಿದೆ. ಯುವತಿಯೊಬ್ಬಳನ್ನು ಹಿಂಬಾಲಿಸಿ ಬಂದು ಬಸ್ಸಿನಲ್ಲಿ ಪೀಡಿಸುತ್ತಿದ್ದ ಆರೋಪ ಸಂಬಂಧ ದೂರು ದಾಖಲಾಗಿತ್ತು.
ಪ್ರವೀಣ ಎಂಬಾತನ ವಿರುದ್ಧ ಯುವತಿಯೊಬ್ಬಳು ದೂರು ನೀಡಿದ್ದಾಳೆ. ಯುವತಿ ಕಚೇರಿ ಮುಗಿಸಿ ಬರುವಾಗ ಕಾದು ನಿಂತು, ಆಕೆ ಹತ್ತಿದ ಬಸ್ಸಿಗೆ ಹತ್ತಿ ಯುವಕ ಪೀಡಿಸುತ್ತಿದ್ದ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಮಾನಸಿಕ ಹಿಂಸೆ ತಾಳಲಾರದೆ ಯುವತಿಯು ಬಸ್ ಕಂಡಕ್ಟರ್ ಮತ್ತೆ ಡ್ರೈವರ್’ಗೆ ತಿಳಿಸಿದ್ದಾಳೆ. ಅವರು ಕೂಡ ಯುವಕನಿಗೆ ಬುದ್ದಿ ಹೇಳಿದ್ದಾರೆ. ಈ ಹಿಂದೆಯು ಕಿರುಕುಳ ನೀಡುತ್ತಿದ್ದರಿಂದ ಯುವತಿ ಕುಟುಂಬದವರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಳು. ಪ್ರವೀಣನಿಗೆ ಪೊಲೀಸರು ಬೈದು ಮುಚ್ಚಳಿಕೆ ಬರೆಸಿಕೊಂಡಿದ್ದರು. ಇದು ಪುನರಾವರ್ತನೆಯಾದ ಹಿನ್ನೆಲೆ ಪ್ರವೀಣನ ವಿರುದ್ಧ ಪ್ರಕರಣ ದಾಖಲಾಗಿದೆ.
ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






