ಬಸ್ಸಿನಲ್ಲಿ ಯುವತಿಗೆ ಪೀಡಿಸುತ್ತಿದ್ದವನ ವಿರುದ್ಧ ಕೇಸ್ ದಾಖಲು

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | CRIME | 19 ಏಪ್ರಿಲ್ 2022

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಬಸ್ಸಿನಲ್ಲಿ ಯುವತಿಯೊಬ್ಬಳನ್ನು ಪೀಡಿಸುತ್ತಿದ್ದವನ ವಿರುದ್ಧ ಪ್ರಕರಣ ದಾಖಲಾಗಿದೆ. ಯುವತಿಯೊಬ್ಬಳನ್ನು ಹಿಂಬಾಲಿಸಿ ಬಂದು ಬಸ್ಸಿನಲ್ಲಿ ಪೀಡಿಸುತ್ತಿದ್ದ ಆರೋಪ ಸಂಬಂಧ ದೂರು ದಾಖಲಾಗಿತ್ತು.

ಪ್ರವೀಣ ಎಂಬಾತನ ವಿರುದ್ಧ ಯುವತಿಯೊಬ್ಬಳು ದೂರು ನೀಡಿದ್ದಾಳೆ. ಯುವತಿ ಕಚೇರಿ ಮುಗಿಸಿ ಬರುವಾಗ ಕಾದು ನಿಂತು, ಆಕೆ ಹತ್ತಿದ ಬಸ್ಸಿಗೆ ಹತ್ತಿ ಯುವಕ ಪೀಡಿಸುತ್ತಿದ್ದ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಮಾನಸಿಕ ಹಿಂಸೆ ತಾಳಲಾರದೆ ಯುವತಿಯು ಬಸ್ ಕಂಡಕ್ಟರ್ ಮತ್ತೆ ಡ್ರೈವರ್’ಗೆ ತಿಳಿಸಿದ್ದಾಳೆ. ಅವರು ಕೂಡ ಯುವಕನಿಗೆ ಬುದ್ದಿ ಹೇಳಿದ್ದಾರೆ. ಈ ಹಿಂದೆಯು ಕಿರುಕುಳ ನೀಡುತ್ತಿದ್ದರಿಂದ ಯುವತಿ ಕುಟುಂಬದವರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಳು. ಪ್ರವೀಣನಿಗೆ ಪೊಲೀಸರು ಬೈದು ಮುಚ್ಚಳಿಕೆ ಬರೆಸಿಕೊಂಡಿದ್ದರು. ಇದು ಪುನರಾವರ್ತನೆಯಾದ ಹಿನ್ನೆಲೆ ಪ್ರವೀಣನ ವಿರುದ್ಧ ಪ್ರಕರಣ ದಾಖಲಾಗಿದೆ.

ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.  

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

Shimoga Nanjappa Hospital

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment