ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SAGARA NEWS | 3 ಅಕ್ಟೋಬರ್ 2020
ಲಾಕ್ಡೌನ್ನಿಂದಾಗಿ ಆರ್ಥಿಕ ಸಂಕಷ್ಟಕ್ಕೀಡಾಗಿ ಸ್ಥಗಿತಗೊಂಡಿದ್ದ ಹೆಗ್ಗೋಡಿನ ಚರಕ ಮಹಿಳಾ ವಿವಿದ್ದೋದ್ದೇಶ ಸಹಕಾರ ಸಂಘಕ್ಕೆ ಗಾಂಧಿ ಜಯಂತಿಯಂದು ಮರಚಾಲನೆ ನೀಡಲಾಗಿದೆ. ನೂತನ ಕಟ್ಟಡವನ್ನೂ ಉದ್ಘಾಟಿಸಲಾಯಿತು.
ಸಂಸದ ಬಿ.ವೈ.ರಾಘವೇಂದ್ರ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಚರಕಕ್ಕೆ ಮರು ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಕರೋನ ಲಾಕ್ಡೌನ್ನಿಂದಾಗಿ ಸ್ಥಗಿತಗೊಂಡಿದ್ದ ಚರಕ ಮರುಚಾಲನೆ ಪಡೆಯುತ್ತಿದೆ. ಸಂಸ್ಥೆಗೆ ಸರ್ಕಾರದಿಂದ ಸಿಗಬೇಕಾದ ಎಲ್ಲಾ ಸೌಲಭ್ಯಗಳನ್ನು ಒದಗಿಸಲಾಗುತ್ತದೆ ಎಂದರು.
ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಮಾತನಾಡಿ, ರಂಗಕರ್ಮಿ ಪ್ರಸನ್ನ ಅವರು ಶ್ರಮವಹಿಸಿ ವ್ಯವಸ್ಥಿತವಾಗಿ ಚರಕ ಸಂಸ್ಥೆಯನ್ನು ಕಟ್ಟಿದ್ದಾರೆ. ಸರ್ಕಾರ ದೇಶಿಯ ಉತ್ಪನ್ನಗಳನ್ನು ತಯಾರಿಸುವವರಿಗೆ, ಸ್ವಯಂ ಉದ್ಯೋಗದಲ್ಲಿ ತೊಡಗಿಕೊಳ್ಳುವವರಿಗೆ ಎಲ್ಲಾ ರೀತಿಯ ಅನುಕೂಲ ನೀಡಬೇಕು ಎಂದರು.

ಮೂಲೆಗದ್ದೆ ಶ್ರೀ ಅಭಿನವ ಚನ್ನಬಸವ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಕೈಮಗ್ಗ ಮತ್ತು ಜವಳಿ ಇಲಾಖೆ ಆಯುಕ್ತ ಡಾ.ಉಪೇಂದ್ರ ಪ್ರತಾಪ್ ಸಿಂಗ್, ಚರಕ ಸಂಸ್ಥೆ ಅಧ್ಯಕ್ಷೆ ಗೌರಮ್ಮ, ಕಾರ್ಯದರ್ಶಿ ಎಂ.ವಿ.ಪ್ರತಿಭಾ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಉಪಸ್ಥಿತರಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






