ಸಾಗರ ತಾಲೂಕಿನಲ್ಲಿ ದಿಢೀರ್‌ ತಪಾಸಣೆ ನಡೆಸಿದ ಅಧಿಕಾರಿಗಳು, ಕಿಶೋರ ಕಾರ್ಮಿಕ ಪತ್ತೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 9 AUGUST 2023

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

SAGARA : ಅನಿರೀಕ್ಷಿತ ತಪಾಸಣೆಯಲ್ಲಿ ಒಬ್ಬ ಕಿಶೋರ ಕಾರ್ಮಿಕ ಪತ್ತೆಯಾಗಿದ್ದಾನೆ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ತಿಳಿಸಿದ್ದಾರೆ. ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (Women and Child Development Department) ಪೊಲೀಸ್ ಇಲಾಖೆ ವತಿಯಿಂದ ಸಾಗರ (Sagara) ತಾಲೂಕಿನಲ್ಲಿ ಅನಿರೀಕ್ಷಿತ ತಪಾಸಣೆ ನಡೆಸಿತ್ತು.

ತಪಾಸಣೆಯಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯಿದೆ 1986 ಹಾಗೂ ತಿದ್ದುಪಡಿ ಕಾಯಿದೆ 2016ರಡಿ ಇತರೆ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು, ಬೀದಿ ಬದಿ ವ್ಯಾಪಾರಿಗಳಿಗೆ, ಮಂಡಕ್ಕಿ ಭಟ್ಟಿಗಳಲ್ಲಿ, ಬಾಲಕಾರ್ಮಿಕ ಕಾಯಿದೆ ಕುರಿತು ಅರಿವು ಮೂಡಿಸಲಾಯಿತು. ನಂತರ ಆಟೊ ಕಾಂಪ್ಲೆಕ್ಸ್ ಬಿ.ಎಚ್. ರಸ್ತೆ, ಗಾಂಧಿನಗರ ಮುಂತಾದ ಪ್ರದೇಶಗಳಲ್ಲಿ ತಪಾಸಣೆ ನಡೆಸಲಾಯಿತು.

ತಪಾಸಣೆಯಲ್ಲಿ ಸಾಗರ ಕಾರ್ಮಿಕ ನಿರೀಕ್ಷಕಿ ಶಿಲ್ಪ, ಯೋಜನಾ ನಿರ್ದೇಶಕ ಎ.ಎಸ್.ರಘುನಾಥ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಾಂತಾಬಾಯಿ, ಪೊಲೀಸ್ ಇಲಾಖೆಯ ಮೀರಾಬಾಯಿ ತಂಡದಲ್ಲಿದ್ದರು.

PARISHRAMA neet academy

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment