SHIVAMOGGA LIVE NEWS | 18 DECEMBER 2023
BYKODU : ಸಹಕಾರಿ ಬ್ಯಾಂಕ್ನ ಬೀಗ ಒಡೆದು 1.70 ಲಕ್ಷ ರೂ. ನಗದು ಕಳ್ಳತನ ಮಾಡಲಾಗಿದೆ. ಬ್ಯಾಕೋಡು ಸಮೀಪದ ಸಸಿಗೊಳ್ಳಿಯ ನಾರಾಯಣ ಗುರು ಪತ್ತಿನ ಸಹಕಾರಿ ಬ್ಯಾಂಕಿನಲ್ಲಿ ಭಾನುವಾರ ರಾತ್ರಿ ಘಟನೆ ಸಂಭವಿಸಿರುವ ಶಂಕೆ ಇದೆ. ಕಳ್ಳರು ಬ್ಯಾಂಕಿನಲ್ಲಿದ್ದ ದಾಖಲಾತಿ ಚಲ್ಲಾಪಿಲ್ಲಿ ಮಾಡಿದ್ದಾರೆ.
ಸೋಮವಾರ ಸಿಬ್ಬಂದಿ ಆಗಮಿಸಿದಾಗ ಬ್ಯಾಂಕ್ನಲ್ಲಿ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ಕಾರ್ಗಲ್ ಠಾಣೆ ಪೊಲೀಸರು, ಬೆರಳಚ್ಚು ತಜ್ಞರು ಪರಿಶೀಲಿಸಿದರು. ಬ್ಯಾಕೋಡು ಭಾಗದಲ್ಲಿ ಕಳ್ಳತನ ಪ್ರಕರಣಗಳು ದಿನೇ ದಿನೆ ಹೆಚ್ಚುತ್ತಿದೆ. ಎರಡು ದಿನದ ಹಿಂದೆ ಕುದರೂರು ಶಾಲೆಯ ಅಡುಗೆ ಮನೆಯ ಬೀಗ ಮುರಿದು ಅಡುಗೆ ಎಣ್ಣೆ, ಬೇಳೆ, ಅಕ್ಕಿ ಕಳ್ಳತನ ಮಾಡಲಾಗಿತ್ತು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಎದೆ ಹಾಲು ಬ್ಯಾಂಕ್, ಮಧ್ಯ ಕರ್ನಾಟಕದಲ್ಲಿ ಇದೆ ಮೊದಲು, ಏನಿದು? ಪ್ರಯೋಜನವೇನು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200