SHIVAMOGGA LIVE NEWS | SAGARA| 15 ಜೂನ್ 2022
ಸಾಗರ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ದೊಡ್ಡಮಟ್ಟದ ಅವ್ಯವಹಾರ ನಡೆಯುತ್ತಿದೆ. ಇದರ ವಿರುದ್ಧ ಕೂಡಲೆ ತನಿಖೆ ನಡೆಸಬೇಕು ಎಂದು ಸಾಗರ ನಗರ ಕಾಂಗ್ರೆಸ್ ಅಧ್ಯಕ್ಷ ಐ.ಎನ್.ಸುರೇಶ್ ಬಾಬು ಒತ್ತಾಯಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸಾಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುರೇಶ್ ಬಾಬು ಅವರು, ಆಸ್ಪತ್ರೆಯಲ್ಲಿ 33 ರೂ.ಗೆ ಒದಗಿಸುತ್ತಿದ್ದ ಆಹಾರವನ್ನು ಈಗ 190 ರೂ.ಗೆ ಪೂರೈಕೆ ಮಾಡಲಾಗುತ್ತಿದೆ. ಇದರಿಂದ ಸರ್ಕಾರಕ್ಕೆ ದೊಡ್ಡಮಟ್ಟದ ನಷ್ಟ ಉಂಟಾಗುತ್ತಿದೆ ಎಂದು ಆರೋಪಿಸಿದರು. FOOD
ಅಡುಗೆ ಕೋಣೆ ಇದ್ದರೂ ಅಡುಗೆ ಇಲ್ಲ
ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಸುಸಜ್ಜಿತ ಅಡುಗೆ ಕೋಣೆ ಇದೆ. ಅಡುಗೆ ಮಾಡಲು ಇಬ್ಬರು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಕಾಗೋಡು ತಿಮ್ಮಪ್ಪ ಅವರು ಸಚಿವರಾಗಿದ್ದ ಸಂದರ್ಭ ಈ ವ್ಯವಸ್ಥೆ ಮಾಡಿದ್ದರು. ಆದರೂ ಇಲ್ಲಿ ಅಡುಗೆ ಮಾಡುತ್ತಿಲ್ಲ. ಕಡೂರಿನ ವ್ಯಕ್ತಿಯೊಬ್ಬರಿಗೆ ಊಟ ಪೂರೈಕೆಯ ಟೆಂಡರ್ ನೀಡಲಾಗಿದೆ. ಇದರಲ್ಲಿ ದೊಡ್ಡಮಟ್ಟದ ಭ್ರಷ್ಟಾಚಾರ ನಡೆದಿರುವ ಶಂಕೆ ಇದೆ ಎಂದು ಸುರೇಶ್ ಬಾಬು ಆರೋಪಿಸಿದರು.
ಶಾಸಕರ ಅರಿವಿಗೆ ಬಂದಂತಿಲ್ಲ
ಸ್ಥಳೀಯ ಶಾಸಕರು ಆರೋಗ್ಯ ರಕ್ಷಾ ಸಮಿತಿ ಅಧ್ಯಕ್ಷರಾಗಿದ್ದಾರೆ. ಉಪ ವಿಭಾಗಾಧಿಕಾರಿ ಅವರು ಕಾರ್ಯದರ್ಶಿಯಾಗಿದ್ದಾರೆ. ಕಡೂರಿನ ವ್ಯಕ್ತಿಗೆ ಊಟ ಸರಬರಾಜು ಮಾಡುವ ಗುತ್ತಿಗೆ ನೀಡಿರುವುದು ಇವರ ಗಮನಕ್ಕೆ ಬಂದಿರುವಂತಿಲ್ಲ. ಈ ಕುರಿತು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸುರೇಶ್ ಬಾಬು ಒತ್ತಾಯಿಸಿದರು.
ನಗರ ಸಭೆ ವಿಪಕ್ಷ ನಾಯಕ ಗಣಪತಿ ಮಂಡಗಳಲೆ, ಪ್ರಮುಖರಾದ ಚಂದ್ರಪ್ಪ, ಡಿ.ದಿನೇಶ್, ಸಂತೋಷ್, ಗಣಾಧೀಶ, ನಿತ್ಯಾನಂದ ಶೆಟ್ಟಿ, ಸಂಜಯ್ ಸೇರಿದಂತೆ ಪ್ರಮುಖರು ಸುದ್ದಿಗೋಷ್ಠಿಯಲ್ಲಿದ್ದರು.
ಇದನ್ನೂ ಓದಿ –ಹುಷಾರ್, ನಿಮ್ಮ ಮನೆಗೂ ಬರಬಹುದು ‘ಮೆಸ್ಕಾಂ ಬಿಲ್ ಕಲೆಕ್ಟರ್’, ಭದ್ರಾವತಿಯಲ್ಲೊಂದು ವಿಚಿತ್ರ ಕೇಸ್
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.