ಶಿವಮೊಗ್ಗ ಲೈವ್.ಕಾಂ | TYAGARTHI NEWS | 25 JUNE 2021
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಸಾಗರ ತಾಲೂಕಿನಲ್ಲಿ ಡೆಂಘೆ ಜ್ವರದ ಭೀತಿ ಹೆಚ್ಚಾಗಿದೆ. ಗ್ರಾಮದಲ್ಲಿ ಡೆಂಘೆ ಹರಡದಂತೆ ಮುನ್ನೆಚ್ಚರಿಕೆ ವಹಿಸಲಾಗುತ್ತಿದೆ. ಇದಕ್ಕೆ ಎಲ್ಲರ ಸಹಕಾರ ಬೇಕು ಎಂದು ತ್ಯಾಗರ್ತಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಇಸಾಕ್ ತಿಳಿಸಿದ್ದಾರೆ.
ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಕರೋನ ಕಾರ್ಯಪಡೆ ಮತ್ತು ವಿಪತ್ತು ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಉಪಾಧ್ಯಕ್ಷ ಇಸಾಕ್, ಡೆಂಘೆ ಮುನ್ನೆಚ್ಚರಿಕೆ ಕುರಿತು ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಕರಪತ್ರಗಳನ್ನು ಹಂಚಲಾಗುತ್ತಿದೆ. ಊರಿನ ಸ್ವಚ್ಛತೆಗೆ ಎಲ್ಲರೂ ಸಹಕಾರ ನೀಡಬೇಕು ಎಂದರು.
ಶಾಲೆಯ ಕೊಠಡಿಗಳನ್ನು ಸ್ವಚ್ಛಗೊಳಿಸಿ, ಸ್ಯಾನಿಟೈಸ್ ಮಾಡಬೇಕಿದೆ. ಇದಕ್ಕೆ ಪಂಚಾಯಿತಿ ವತಿಯಿಂದ ನೆರವು ನೀಡಲು ಸಿದ್ಧ ಎಂದು ಅವರು ತಿಳಿಸಿದರು.
ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶ್ರೀದೇವಿ ಮಾತನಾಡಿ, ಲಾಕ್ ಡೌನ್ ಸಡಿಲ ಮಾಡಲಾಗಿದೆ. ಹಾಗೆಂದು ಜನರು ಮೈ ಮರೆಯುವಂತಿಲ್ಲ. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸಬೇಕು. ಮೂರನೆ ಅಲೆ ಬಗ್ಗೆ ಎಚ್ಚರದಿಂದ ಇರಬೇಕು. ಮಕ್ಕಳ ವಿಚಾರದಲ್ಲೂ ನಿರ್ಲಕ್ಷ ತೋರಬಾರದು ಎಂದು ತಿಳಿಸಿದರು.
ಪಿಡಿಒ ಮಂಜಾನಾಯ್ಕ್, ಗ್ರಾಮ ಲೆಕ್ಕಿಗ ಫಕೀರೇಶ್ ಸೇರಿದಂತೆ ಹಲವರು ಸಭೆಯಲ್ಲಿದ್ದರು.

(ಶಿವಮೊಗ್ಗ ಲೈವ್ನ ನಮ್ಮೂರ ನ್ಯೂಸ್ – ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭಗಳು ಸೇರಿದಂತೆ ಸುದ್ದಿಯಾಗುವ ಸಂಗತಿಗಳಿದ್ದರೆ ವಾಟ್ಸಪ್ ಮಾಡಿ. ನಿಮ್ಮೂರ ಸುದ್ದಿ ಜಿಲ್ಲೆಯ ಜನಕ್ಕೆ ತಲುಪಲಿ.)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






