ಆನಂದಪುರ ಠಾಣೆ ಪೊಲೀಸರ ಕಾರ್ಯಾಚರಣೆ, ಗೋವು ಸಾಗಣೆ ಮಾಡುತ್ತಿದ್ದ ಶಿಕಾರಿಪುರದ ಇಬ್ಬರ ಬಂಧನ

ತ್ಯಾಗರ್ತಿ: ಜಾನುವಾರು (Cow) ಅಕ್ರಮ ಸಾಗಣೆ ಮಾಡುತ್ತಿದ್ದ ವಾಹನವನ್ನು ಗ್ರಾಮಸ್ಥರ ಸಹಕಾರದೊಂದಿಗೆ ಆನಂದಪುರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಾಗರ ತಾಲೂಕಿನ ತ್ಯಾಗರ್ತಿ ಮಾರಿಕಾಂಬಾ ವೃತ್ತದಲ್ಲಿ ಕಾರ್ಯಾಚರಣೆ ನಡೆಸಲಾಯಿತು.

ಪರವಾನಗಿ ಇಲ್ಲದೆ 2 ಎಮ್ಮೆ, 1 ಕೋಣ, 2 ಹೋರಿಗಳನ್ನು ಅಶೋಕ ಲೇಲ್ಯಾಂಡ್ ಗೂಡ್ಸ್ ವಾಹನದಲ್ಲಿ ತುಂಬಿ ಸಾಗಿಸುತ್ತಿದ್ದರು. ಶಿಕಾರಿಪುರ ತಾಲೂಕು ಬಿಳಕಿ ಗ್ರಾಮದ ಮೆಹಬೂಬ್ ಬಾಷಾ ಹಾಗೂ ಮಕ್ಬೂಲ್ ಸಾಬ್ ಎಂಬುವರನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರೆದಿದೆ.

ಇದನ್ನೂ ಓದಿ » ಅಡಿಕೆ ಬೆಳೆಯಲ್ಲಿ ಅಂತರ, ಮಿಶ್ರ ಬೆಳೆ ನಿರ್ವಹಣೆ ಬಗ್ಗೆ ಫೋನ್‌ ಇನ್‌ ಕಾರ್ಯಕ್ರಮ, ಯಾವಾಗ?

JNNCE-Admission-Advt-scaled

Cow theft case two arrested

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment