SHIVAMOGGA LIVE NEWS | 7 JANUARY 2024
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
SAGARA : ಮಾರ್ಕೆಟ್ ರಸ್ತೆ ನಿವಾಸಿಗಳು ತಮ್ಮ ಕಟ್ಟಡ ತೆರವುಗೊಳಿಸುವ ಸಂಬಂಧ ತಾಲ್ಲೂಕು ಆಡಳಿತದ ಎದುರು ಕೆಲವು ಬೇಡಿಕೆಗಳನ್ನು ಇಟ್ಟಿದ್ದಾರೆ. ಕಾನೂನಿನ ಚೌಕಟ್ಟಿನಲ್ಲಿರುವ ಬೇಡಿಕೆಗಳನ್ನು ಶೀಘ್ರ ಈಡೇರಿಸಲಾಗುತ್ತದೆ. ಇತರ ಬೇಡಿಕೆಗಳಿಗೆ ಕೂಡ ಆಡಳಿತ ಸಹಾನುಭೂತಿಯಿಂದ ಸ್ಪಂದಿಸಲಿದೆ. ಸ್ಥಳೀಯರ ನೆರವಿನೊಂದಿಗೆ ರಸ್ತೆ ವಿಸ್ತರಣೆ ಕಾರ್ಯ ಪೂರ್ಣಗೊಳಿಸಲಾಗುತ್ತದೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು.
ಸಾಗರದ ಮಾರ್ಕೆಟ್ ರಸ್ತೆ ವಿಸ್ತರಣೆ ಕಾರ್ಯವನ್ನು ಪೂರ್ಣಗೊಳಿಸುವ ಸಂಬಂಧ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಹಾಗೂ ಇತರ ಅಧಿಕಾರಿಗಳ ಜೊತೆ ಸ್ಥಳ ಪರಿಶೀಲನೆ ನಡೆಸಿದ ಬಳಿಕ ಶಾಸಕ ಬೇಳೂರು ಗೋಪಾಲಕೃಷ್ಣ ಸುದ್ದಿಗಾರರೊಂದಿಗೆ ಮಾತನಾಡಿದರು.
ಮಾರ್ಕೆಟ್ ರಸ್ತೆಯ ವಿಸ್ತರಣೆಗಾಗಿ ಕೆಲವರು ಈಗಾಗಲೆ ಕಟ್ಟಡಗಳನ್ನು ಬಿಟ್ಟುಕೊಟ್ಟಿದ್ದಾರೆ. ಇದರಿಂದಾಗಿ ರಸ್ತೆಯ ಒಂದು ಭಾಗ ಮಾತ್ರ ವಿಸ್ತರಣೆಯಾಗಿದೆ. ಉಳಿದವರು ಕಟ್ಟಡಗಳನ್ನು ತೆರವುಗೊಳಿಸಿದಲ್ಲಿ ವಿಸ್ತರಣೆ ಕಾರ್ಯ ಪೂರ್ಣಗೊಳ್ಳಲಿದೆ. ಊರಿನ ಸೌಂದರ್ಯ ಹೆಚ್ಚುವ ಜೊತೆಗೆ ವ್ಯಾಪಾರ ವಹಿವಾಟಿಗು ಅನುಕೂಲವಾಗುತ್ತದೆ. ಜ.17ರಂದು ತಮ್ಮ ಕಚೇರಿಯಲ್ಲಿ ರಸ್ತೆ ವಿಸ್ತರಣೆ ಸಂಬಂಧ ಸಭೆ ಆಯೋಜಿಸಲಾಗಿದೆ ಎಂದರು.
ಇದನ್ನೂ ಓದಿ – ಹೆದ್ದಾರಿಯಲ್ಲಿ ಮೂವರಿಗೆ ಅಪ್ಪಳಿಸಿ, ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು
ಉಪವಿಭಾಗಾಧಿಕಾರಿ ಯತೀಶ್, ತಹಶೀಲ್ದಾರ್ ಚಂದ್ರಶೇಖರ್ ನಾಯ್ಕ, ನಗರಸಭೆ ಪೌರಾಯುಕ್ತ ಎಚ್.ಕೆ.ನಾಗಪ್ಪ, ಲೋಕೋಪಯೋಗಿ ಇಲಾಖೆ ಅಭಿಯಂತರ ಮಂಜುನಾಥ್, ಸ್ಥಳೀಯರು ಇದ್ದರು.
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






