ಜಿಂಕೆ ಬೇಟೆಯಾಡಿ ಸಾಂಬಾರು ಮಾಡುವಾಗ ದಾಳಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SAGARA NEWS, 19 NOVEMBER 2024 : ಜಿಂಕೆ (Deer) ಬೇಟೆಯಾಡಿದ ಆರೋಪದ ಸಂಬಂಧ ಇಲ್ಲಿನ ಕರ್ನಾಟಕ ರಕ್ಷಣಾ ವೇದಿಕೆಯ ತಾಲ್ಲೂಕು ಘಟಕದ ಅಧ್ಯಕ್ಷ ಜಯರಾಮ್ ಸೂರನಗದ್ದೆ ವಿರುದ್ಧ ಸೋಮವಾರ ಪ್ರಕರಣ ದಾಖಲಾಗಿದೆ.

ಜಿಂಕೆಯನ್ನು ಬೇಟೆಯಾಡಿ ಕೆಲವರು ಮಾಂಸವನ್ನು ಹಂಚಿಕೊಂಡಿದ್ದಾರೆ ಎಂಬ ಮಾಹಿತಿ ಆಧರಿಸಿ ಸೂರನಗದ್ದೆ ಗ್ರಾಮದಲ್ಲಿರುವ ಜಯರಾಮ್ ಅವರ ಮನೆಯ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ನಡೆಸಿದ್ದಾರೆ. ಸ್ಥಳದಲ್ಲಿ ಪತ್ತೆಯಾದ ಜಿಂಕೆ ಮಾಂಸವನ್ನು ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ಆರೋಪಿ ಜಯರಾಮ್ ಪರಾರಿಯಾಗಿದ್ದಾರೆ ಎಂದು ಸಿಬ್ಬಂದಿ ತಿಳಿಸಿದ್ದಾರೆ.

ಇದನ್ನೂ ಓದಿ » ತುಂಗಾ ನದಿಯಲ್ಲಿ ಬ್ಯಾಂಕ್‌ ಮ್ಯಾನೇಜರ್‌ಗಾಗಿ ಶೋಧ

ದಾಳಿಯಲ್ಲಿ ವಲಯ ಅರಣ್ಯಾಧಿಕಾರಿ ಅಣ್ಣಪ್ಪ, ವಿಜಯಕುಮಾರ್, ಯಶವಂತ್, ಸುಮಿತಾ, ವೇದನಾಯ್ಕ್, ಉಮೇಶ್, ಶಿವನಗೌಡ ಪಾಲ್ಗೊಂಡಿದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment