SAGARA NEWS, 29 OCTOBER 2024 : ರಸ್ತೆಯಲ್ಲಿ ದಿಢೀರ್ ದೆವ್ವ ಪ್ರತ್ಯಕ್ಷವಾಗಿ ಬೈಕ್ ಸವಾರರಿಬ್ಬರು ಗಾಯಗೊಂಡಿದ್ದಾರೆ. ಈ ಪೈಕಿ ಒಬ್ಬಾತನ ಸ್ಥಿತಿ ಗಂಭೀರವಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹಬ್ಬಿಸಲಾಗಿದೆ (Viral). ಇದರಿಂದ ಸಾರ್ವಜನಿಕರು ಆತಂಕಕ್ಕೀಡಾಗಿದ್ದಾರೆ. ಇಂತಹ ಪೋಸ್ಟ್ ಪ್ರಕಟಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಸಾಗರ ತಾಲೂಕು ಕಾರ್ಗಲ್ ಸಮೀಪದ ಕಂಚಿಕೈ ರಸ್ತೆಯಲ್ಲಿ ಇಬ್ಬರು ಬೈಕ್ ಸವರಾರಿಗೆ ದೆವ್ವ ಎದುರಾಗಿದೆ. ಒಬ್ಬರ ಸ್ಥಿತಿ ಗಂಭೀರವಾಗಿದ್ದು ಮಣಿಪಾಲದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮತ್ತೊಬ್ಬರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಲಾಗಿತ್ತು. ಇದರಿಂದ ಈ ಭಾಗದ ಜನರಲ್ಲಿ ಆತಂಕ ಉಂಟಾಗಿತ್ತು.

ಪೊಲೀಸ್ ಇಲಾಖೆಯಿಂದ ವಾರ್ನಿಂಗ್
ಸುಳ್ಳು ಸುದ್ದಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವುದು, ಫಾರ್ವರ್ಡ್ ಮಾಡುವುದು, ಶೇರ್ ಮಾಡುವುದು ಅಪರಾಧ. ಈ ರೀತಿ ಮಾಡುವುದು ಕಂಡುಬಂದಲ್ಲಿ, ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಪ್ರಕಟಣೆ, ಜಿಲ್ಲಾ ಪೊಲೀಸ್ ಇಲಾಖೆ
![]()
ಇದನ್ನೂ ಓದಿ » ಭೂ ಹಕ್ಕು, ನಾಳೆ ವಿಧಾನಸೌಧದಲ್ಲಿ ರೈತರೊಂದಿಗೆ ಮಹತ್ವದ ಮೀಟಿಂಗ್, ಯಾರೆಲ್ಲ ಭಾಗವಹಿಸ್ತಾರೆ?
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು





