ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 21 ಸೆಪ್ಟೆಂಬರ್ 2019
ಸಾಗರ ತಾಲೂಕಿನ ಬಚ್ಚಗಾರ ಗ್ರಾಮದ ಮನೆಯೊಂದರಲ್ಲಿ ಕಳ್ಳನಿಗೆ ಒಡವೆ, ಹಣ ಸಿಗದ ಕಾರಣ ಮಾವಿನ ಮಿಡಿ ಉಪ್ಪಿನಕಾಯಿಯನ್ನೇ ಕದ್ದೊಯ್ದ ಕುತೂಹಲಕಾರಿ ಘಟನೆ ಗುರುವಾರ ರಾತ್ರಿ ನಡೆದಿದೆ.

ಸಾಗರ-ಜೋಗಫಾಲ್ಸ್ ಮಾರ್ಗದಲ್ಲಿರುವ ಬಚ್ಚಗಾರು ಗ್ರಾಮದ ಶುಂಠಿ ಸತ್ಯನಾರಾಯಣಭಟ್ಟರ ಮನೆಯಲ್ಲಿ ಈ ಘಟನೆ ನಡೆದಿದೆ. ಮನೆಯೊಳಗೆ ನುಗ್ಗಿದ ಕಳ್ಳರು ಏನೂ ಸಿಕ್ಕಿಲ್ಲ. ಆದರೆ, ಸುವಾಸನೆ ಬೀರುವ ಅಪ್ಪೆ ಮಾವಿನ ಮಿಡಿಯ ಉಪ್ಪಿನಕಾಯಿ ಕಂಡಿದೆ. ಅದರ ರುಚಿಯನ್ನು ಸವಿದ ಕಳ್ಳ ಬಾಟಲಿಯನ್ನೇ ಕದ್ದೊಯ್ದಿದ್ದಾನೆ.
ಸಾಗರ ತಾಲೂಕಿನ ಬಚ್ಚಗಾರು ಗ್ರಾಮದಲ್ಲಿ ಸರಣಿ ಕಳ್ಳತನ ಮಾಡಲಾಗಿದೆ. ಮನೆಯ ಬೀಗ ಒಡೆದ ಹಣ ಬೆಳ್ಳಿ, ಎಲೆಕ್ಟ್ರಾನಿಕ್ ವಸ್ತುಗಳನ್ನು ಕಳವು ಮಾಡಲಾಗಿದೆ. ಆದರೆ, ಸತ್ಯನಾರಾಯಣಭಟ್ಟರ ಮನೆಯಲ್ಲಿ ಏನೂ ಸಿಗದಿದ್ದಕ್ಕೆ ಉಪ್ಪಿನ ಕಾಯಿಯನ್ನೇ ಕದ್ದೊಯ್ಯಲಾಗಿದೆ.
ಗುರುಮೂರ್ತಿ ಗಾಲಿಮನೆ, ಭಾರತಿ ಜಯರಾಂ ಎಂಬುವವರ ಮನೆಯಲ್ಲೂ ಕಳ್ಳತನ ಮಾಡಲಾಗಿದೆ. ಮನೆಗೆ ಬೀಗ ಹಾಕಿ ಬೇರೆಡೆಗೆ ಹೋದಾಗ ಕೃತ್ಯ ಎಸಗಲಾಗಿದೆ.
ಎರಡು ವಾರಗಳ ಹಿಂದಷ್ಟೇ ಶ್ರೀಪತಿ ಎಂಬಾತನ ಮನೆಗೆ ನುಗ್ಗಿದ ಕಳ್ಳರು ನಾಲ್ಕು ಸಾವಿರ ನಗದು ಎಗರಿಸಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | shivamoggalive@gmail.com
LATEST NEWS
- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

- ಬೆಳಗ್ಗೆ ಲೇಔಟ್ಗೆ ಬಂದ ಲೆಕ್ಚರರ್ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು
















