ಶಿವಮೊಗ್ಗ ಲೈವ್.ಕಾಂ | SAGARA NEWS | 7 ಸೆಪ್ಟೆಂಬರ್ 2021
ವಿದ್ಯುತ್ ಶಾಕ್’ಗೆ ಒಳಗಾಗಿ ಲೈನ್ ಮ್ಯಾನ್ ಒಬ್ಬರು ವಿದ್ಯುತ್ ಕಂಬದಿಂದ ಕೆಳಗೆ ಬಿದ್ದು, ಗಾಯಗೊಂಡಿದ್ದಾರೆ. ಬಿಎಸ್ಎನ್ಎಲ್ ಟವರ್ ಆಪರೇಟರ್ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಹುಲಿದೇವರಬನದ ರವಿಕಾಂತ್ (24) ಗಾಯಗೊಂಡ ಲೈನ್ ಮ್ಯಾನ್. ಸಾಗರ ಗ್ರಾಮಾಂತರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಿಸಿದ್ದಾರೆ.
ಏನಿದು ಘಟನೆ? ಶಾಕ್’ಗೆ ಕಾರಣವೇನು?
ಸಾಗರದ ಆವಿನಹಳ್ಳಿ ಫೀಡರ್’ನಲ್ಲಿ ನಿರ್ವಹಣೆ ಇರುವುದರಿಂದ ವಿದ್ಯುತ್ ಕಡಿತಗೊಳಿಸುವುದಾಗಿ ಮೆಸ್ಕಾಂ ಪ್ರಕಟಣೆ ಹೊರಡಿಸಿತ್ತು. ಗಿಣಿವಾರ ಗ್ರಾಮದ ಕೊಡಚಾದ್ರಿ ಶಾಲೆಯ ವಿದ್ಯುತ್ ಲೈನ್ ನಿರ್ವಹಣೆ ಮಾಡುತ್ತಿದ್ದಾಗ ರವಿಕಾಂತ್ ಅವರಿಗೆ ವಿದ್ಯತ್ ಶಾಕ್ ಆಗಿದೆ. 15 ಅಡಿಯಿಂದ ಕೆಳಗೆ ಬಿದ್ದು ಗಾಯಗೊಂಡಿದ್ದಾರೆ.
ಬಿಎಸ್ಎನ್ಎಲ್ ಟವರ್ ನಿರ್ವಾಹಕ ಕಾರಣ
ಮೆಸ್ಕಾಂ ಲೈನ್ ಮ್ಯಾನ್ ವಿದ್ಯುತ್ ಶಾಕ್’ಗೆ ಒಳಗಾಗಲು ಬಿಎಸ್ಎನ್ಎಲ್ ಟವರ್ ನಿರ್ವಹಣೆ ಮಾಡುತ್ತಿದ್ದವರೆ ಕಾರಣ ಎಂದು ಆರೋಪಿಸಲಾಗಿದೆ. ಟವರ್’ನ ಜನರೇಟರನ್ನು ನಿರ್ವಾಹಕ ದಿಢೀರನೆ ಚಾಲನೆ ಮಾಡಿದ್ದಾನೆ. ಇದರಿಂದ ವಿದ್ಯುತ್ ರಿಟರ್ನ್ ಆಗಿದೆ ಎಂದು ಆರೋಪಿಸಲಾಗಿದೆ. ಹಾಗಾಗಿ ಕಂಬದ ಮೇಲೆ ಕೆಲಸ ಮಾಡುತ್ತಿದ್ದ ರವಿಕಾಂತ್’ಗೆ ಶಾಕ್ ಹೊಡೆದಿದೆ ಎಂದು ತಿಳಿದು ಬಂದಿದೆ.
ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200