ಮುಂದುವರೆದ ಟೆಂಪಲ್‌ ರನ್‌, ಇವತ್ತು ಸಿಗಂದೂರು, ಹುಂಚಕ್ಕೆ ಈ‍ಶ್ವರಪ್ಪ, ಭೇಟಿ ಕುರಿತು ಏನೆಲ್ಲ ಹೇಳಿದರು?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 19 MARCH 2024

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

SHIMOGA : ಬಂಡಾಯದ ಬಾವುಟ ಹಾರಿಸಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮಠ, ಮಂದಿರ ಭೇಟಿ ಮುಂದುವರೆಸಿದ್ದಾರೆ. ಅಲ್ಲಲ್ಲಿ ಬೆಂಬಲಿಗರನ್ನು ಭೇಟಿಯಾಗಿ ಚುನಾವಣೆ ಕುರಿತು ಚರ್ಚೆ ನಡೆಸಿದ್ದಾರೆ.

ಈಶ್ವರಪ್ಪ ಅವರು ಇವತ್ತು ಸಿಗಂದೂರು ಶ್ರೀ ಚೌಡೇ‍ಶ್ವರಿ ಸನ್ನಿಧಿಗೆ ತೆರಳಿ ದೇವಿಯ ದರ್ಶನ ಪಡೆದರು. ಧರ್ಮದರ್ಶಿ ರಾಮಪ್ಪ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಇನ್ನು, ಹುಂಚ ಜೈನ ಮಠಕ್ಕೆ ಭೇಟಿ ನೀಡಿ ಶ್ರೀ ದೇವೇಂದ್ರ ಕೀರ್ತಿ ಭಟ್ಟಾರಕ ಸ್ವಾಮೀಜಿ ಅವರೊಂದಿಗೆ ಚರ್ಚೆ ನಡೆಸಿದರು.

ಸಾಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ‘ನಿನ್ನೆ 12 ಮಠಾಧಿಪತಿಗಳನ್ನು ಭೇಟಿಯಾಗಿದ್ದೆ. ನೀವು ಹಿಂದುತ್ವದ ಪರವಾಗಿದ್ದೀರ. ಆದ್ದರಿಂದ ತಮ್ಮ ಬೆಂಬಲವಿದೆ ಎಂದು ಮಠಾಧೀಶರು ತಿಳಿಸಿದ್ದಾರೆ. ಈಗ ಸಿಗಂದೂರು ಚೌಡೇಶ್ವರಿ ಆಶೀರ್ವಾದ ಪಡೆದಿದ್ದೇನೆ. ಈ ಭಾಗದಲ್ಲಿಯು ಜನರು ತಮಗೆ ಬೆಂಬಲ ವ್ಯಕ್ತಪಡಿಸಿದ್ದಾರೆ’ ಎಂದು ತಿಳಿಸಿದರು.

ಪುತ್ರ ಕೆ.ಇ.ಕಾಂತೇಶ್‌ ಸೇರಿದಂತೆ ಹಲವು ಪ್ರಮುಖರು ಈಶ್ವರಪ್ಪ ಅವರೊಂದಿಗೆ ಇದ್ದರು.

 ಇದನ್ನೂ ಓದಿ ಮೋದಿ ಕಾರ್ಯಕ್ರಮಕ್ಕೆ ಬರಲ್ಲ ಅಂದುಕೊಂಡವರು ಬಂದರು, ಬರುತ್ತಾರೆ ಅಂದುಕೊಂಡವರು ಬರಲೇ ಇಲ್ಲ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment