ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 9 ಮಾರ್ಚ್ 2022
ಸಾಗರದ ಗಣಪತಿ ಕೆರೆಯಲ್ಲಿ ಈ ವರ್ಷವು ನೀರು ನಾಯಿಗಳು ಪ್ರತ್ಯಕ್ಷವಾಗಿವೆ. ಇವುಗಳ ಚಲನವಲನ, ಚಿನ್ನಾಟವನ್ನು ಕಣ್ತುಂಬಿಕೊಳ್ಳಲು, ಕ್ಯಾಮರಾ, ಮೊಬೈಲ್ನಲ್ಲಿ ಸೆರೆ ಹಿಡಿಯಲು ಹಲವರು ಕೆರೆ ಬಳಿಗೆ ಬರುತ್ತಿದ್ದಾರೆ.
ಕಳೆದ ಕೆಲವು ದಿನದಿಂದ ನೀರು ನಾಯಿಗಳು ದೊಡ್ಡ ಸಂಖ್ಯೆಯಲ್ಲಿ ಗಣಪತಿ ಕೆರೆಯಲ್ಲಿ ಕಾಣಿಸಿಕೊಂಡಿವೆ. ಸುಮಾರು 50 ನೀರು ನಾಯಿಗಳು ಬಂದಿವೆ.
ಶರವಾತಿ ಹಿನ್ನೀರು, ವರದಾ ನದಿಗಳು ನೀರು ನಾಯಿಗಳ ಆವಾಸ ಸ್ಥಾನ. ವರದಾ ನದಿಯ ಉಪ ನದಿಗಳ ಮೂಲಕ ಸಾಗರ ಪಟ್ಟಣದ ಗಣಪತಿ ಕೆರೆಗೆ ನೀರು ನಾಯಿಗಳು ಬಂದಿರುವ ಸಾದ್ಯತೆ ಇದೆ. ಅಳಿವಿನ ಅಂಚಿನಲ್ಲಿರುವ ಪ್ರಾಣಿ ಆಗಿರುವುದರಿಂದ ಇವುಗಳಿಗೆ ಹಾನಿ ಮಾಡಿದರೆ ಅರಣ್ಯ ಇಲಾಖೆ ಕೇಸ್ ದಾಖಲು ಮಾಡುತ್ತದೆ.
ಮೀನುಗಳು ಗುಳುಂ ಸ್ವಾಹ
ಗಣಪತಿ ಕೆರೆಯಲ್ಲಿ ಮೀನುಗಾರಿಕೆ ಗುತ್ತಿಗೆ ಪಡೆದವರಿಗೆ ನೀರು ನಾಯಿಗಳು ಭಾರಿ ಸಂಕಷ್ಟ ತಂದೊಡ್ಡಿವೆ. ಗೆಂಡೆ, ಕಾಟ್ಲಾ, ಗೌರಿ, ಮೃಗಾಲ, ಸೇರಿ ವಿವಿಧ ಜಾತಿಯ ಮೀನುಗಳನ್ನು ಕೆರೆಯಲ್ಲಿ ಬಿಡಲಾಗಿದೆ. ಆದರೆ ನೀರು ನಾಯಿಗಳ ಗುಂಪು ಪ್ರತಿದಿನ ನೂರಾರು ಮೀನುಗಳನ್ನು ಹಿಡಿದು ತಿನ್ನುತ್ತಿವೆ.
ಮೀನುಗಾರರ ಸಹಕಾರ ಸಂಘದವರು ಕೆರೆಯಲ್ಲಿ ಮೀನುಗಾರಿಕೆ ಗುತ್ತಿಗೆ ಪಡೆದಿದ್ದಾರೆ. ಈ ಕುರಿತು ಮಾತನಾಡಿದ ಮೀನುಗಾರರಾದ ಭೈರಪ್ಪ, ‘ಕೆರೆ ಸ್ವಚ್ಚವಾಗಿದೆ. ನೀರು ನಾಯಿಗಳಿಗೆ ಮೀನು ಸುಲಭವಾಗಿ ಕಾಣಿಸುತ್ತವೆ. ಪ್ರತಿದಿನ ನೀರು ನಾಯಿಗಳು ಅವುಗಳನ್ನು ಹಿಡಿದು ತಿನ್ನುತ್ತಿವೆ. ನಾವು ಬಲೆ ಹಾಕಿದರೆ ಬೆರಳೆಣಿಕೆಯಷ್ಟು ಮೀನುಗಳು ಮಾತ್ರ ಸಿಗುತ್ತಿವೆ. ಬಲೆಯನ್ನೂ ಕಡಿದು ಮೀನು ಹಿಡಿದುಕೊಂಡು ಹೋಗುತ್ತಿವೆ’ ಅನ್ನುತ್ತಾರೆ.
ನೀರು ನಾಯಿಗಳ ಗುಂಪು ಹೆಚ್ಚು ಸಮಯ ಒಂದೆ ಕಡೆ ಇರುವುದಿಲ್ಲ. ಒಂದೆಡೆಯಿಂದ ಮತ್ತೊಂದು ಕಡೆಗೆ ತೆರಳುತ್ತಿರುತ್ತವೆ. ಸದಾ ಗುಂಪಿನಲ್ಲಿ ಕಾಣಿಸಿಕೊಳ್ಳುತ್ತವೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















