| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
SHIVAMOGGA LIVE NEWS | 9 ಮಾರ್ಚ್ 2022
ಸಾಗರದ ಗಣಪತಿ ಕೆರೆಯಲ್ಲಿ ಈ ವರ್ಷವು ನೀರು ನಾಯಿಗಳು ಪ್ರತ್ಯಕ್ಷವಾಗಿವೆ. ಇವುಗಳ ಚಲನವಲನ, ಚಿನ್ನಾಟವನ್ನು ಕಣ್ತುಂಬಿಕೊಳ್ಳಲು, ಕ್ಯಾಮರಾ, ಮೊಬೈಲ್ನಲ್ಲಿ ಸೆರೆ ಹಿಡಿಯಲು ಹಲವರು ಕೆರೆ ಬಳಿಗೆ ಬರುತ್ತಿದ್ದಾರೆ.
ಕಳೆದ ಕೆಲವು ದಿನದಿಂದ ನೀರು ನಾಯಿಗಳು ದೊಡ್ಡ ಸಂಖ್ಯೆಯಲ್ಲಿ ಗಣಪತಿ ಕೆರೆಯಲ್ಲಿ ಕಾಣಿಸಿಕೊಂಡಿವೆ. ಸುಮಾರು 50 ನೀರು ನಾಯಿಗಳು ಬಂದಿವೆ.
ಶರವಾತಿ ಹಿನ್ನೀರು, ವರದಾ ನದಿಗಳು ನೀರು ನಾಯಿಗಳ ಆವಾಸ ಸ್ಥಾನ. ವರದಾ ನದಿಯ ಉಪ ನದಿಗಳ ಮೂಲಕ ಸಾಗರ ಪಟ್ಟಣದ ಗಣಪತಿ ಕೆರೆಗೆ ನೀರು ನಾಯಿಗಳು ಬಂದಿರುವ ಸಾದ್ಯತೆ ಇದೆ. ಅಳಿವಿನ ಅಂಚಿನಲ್ಲಿರುವ ಪ್ರಾಣಿ ಆಗಿರುವುದರಿಂದ ಇವುಗಳಿಗೆ ಹಾನಿ ಮಾಡಿದರೆ ಅರಣ್ಯ ಇಲಾಖೆ ಕೇಸ್ ದಾಖಲು ಮಾಡುತ್ತದೆ.
ಮೀನುಗಳು ಗುಳುಂ ಸ್ವಾಹ
ಗಣಪತಿ ಕೆರೆಯಲ್ಲಿ ಮೀನುಗಾರಿಕೆ ಗುತ್ತಿಗೆ ಪಡೆದವರಿಗೆ ನೀರು ನಾಯಿಗಳು ಭಾರಿ ಸಂಕಷ್ಟ ತಂದೊಡ್ಡಿವೆ. ಗೆಂಡೆ, ಕಾಟ್ಲಾ, ಗೌರಿ, ಮೃಗಾಲ, ಸೇರಿ ವಿವಿಧ ಜಾತಿಯ ಮೀನುಗಳನ್ನು ಕೆರೆಯಲ್ಲಿ ಬಿಡಲಾಗಿದೆ. ಆದರೆ ನೀರು ನಾಯಿಗಳ ಗುಂಪು ಪ್ರತಿದಿನ ನೂರಾರು ಮೀನುಗಳನ್ನು ಹಿಡಿದು ತಿನ್ನುತ್ತಿವೆ.
ಮೀನುಗಾರರ ಸಹಕಾರ ಸಂಘದವರು ಕೆರೆಯಲ್ಲಿ ಮೀನುಗಾರಿಕೆ ಗುತ್ತಿಗೆ ಪಡೆದಿದ್ದಾರೆ. ಈ ಕುರಿತು ಮಾತನಾಡಿದ ಮೀನುಗಾರರಾದ ಭೈರಪ್ಪ, ‘ಕೆರೆ ಸ್ವಚ್ಚವಾಗಿದೆ. ನೀರು ನಾಯಿಗಳಿಗೆ ಮೀನು ಸುಲಭವಾಗಿ ಕಾಣಿಸುತ್ತವೆ. ಪ್ರತಿದಿನ ನೀರು ನಾಯಿಗಳು ಅವುಗಳನ್ನು ಹಿಡಿದು ತಿನ್ನುತ್ತಿವೆ. ನಾವು ಬಲೆ ಹಾಕಿದರೆ ಬೆರಳೆಣಿಕೆಯಷ್ಟು ಮೀನುಗಳು ಮಾತ್ರ ಸಿಗುತ್ತಿವೆ. ಬಲೆಯನ್ನೂ ಕಡಿದು ಮೀನು ಹಿಡಿದುಕೊಂಡು ಹೋಗುತ್ತಿವೆ’ ಅನ್ನುತ್ತಾರೆ.
ನೀರು ನಾಯಿಗಳ ಗುಂಪು ಹೆಚ್ಚು ಸಮಯ ಒಂದೆ ಕಡೆ ಇರುವುದಿಲ್ಲ. ಒಂದೆಡೆಯಿಂದ ಮತ್ತೊಂದು ಕಡೆಗೆ ತೆರಳುತ್ತಿರುತ್ತವೆ. ಸದಾ ಗುಂಪಿನಲ್ಲಿ ಕಾಣಿಸಿಕೊಳ್ಳುತ್ತವೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಶಿವಮೊಗ್ಗದಲ್ಲಿ 300 ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ, ಇಲ್ಲಿವೆ ಸಾಲು ಸಾಲು ಫೋಟೊಗಳು
- ಇವತ್ತು ಉತ್ತರಾಷಾಢ ನಕ್ಷತ್ರ, ದ್ವಾದಶಿ, ರಾಶಿ ಫಲ ಹೇಗಿದೆ? – ಓದಲು ಇಲ್ಲಿ ಕ್ಲಿಕ್ ಮಾಡಿ
- ಶಿವಮೊಗ್ಗದ ಜೊತೆಗೆ ಶಾಮನೂರು ನಂಟು, ಇಲ್ಲಿತ್ತು ವ್ಯಾವಹಾರಿಕ ಸಂಬಂಧ, ಶಿಷ್ಯರ ಬಳಗ, ಚಿಕ್ಕಮ್ಮನ ಮನೆ
- ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ಮೈಸೂರಿನ ವ್ಯಕ್ತಿ
- ಯಡೇಹಳ್ಳಿ ಕ್ರಾಸ್ ಬಳಿ ಅರಣ್ಯ ಸಂಚಾರಿ ದಳದ ದಾಳಿ, ಕಾರಾವಾರದ ವ್ಯಕ್ತಿ ಅರೆಸ್ಟ್
- ಅಡಿಕೆ ಎಲೆಚುಕ್ಕಿ ರೋಗ, ಬಾಕಿ ಹಣ ಬಿಡುಗಡೆಗೆ ಸಿಎಂ ಸೂಚನೆ
- ಕಿತ್ತೂರು ರಾಣಿ ಚನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ
- ಸಾಗರ ನಗರಸಭೆ ಎಚ್ಚರಿಕೆ, ಬೀದಿ ನಾಯಿಗಳ ನಿಯಂತ್ರಣ ಕುರಿತು ಪ್ರಮುಖ ಪ್ರಕಟಣೆ
![]()