ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಜುಲೈ 2021
ಅಬಕಾರಿ ಇಲಾಖೆ ಅಧಿಕಾರಿಗಳು ಇವತ್ತು ಮೂರು ಕಡೆ ದಾಳಿ ನಡೆಸಿದ್ದಾರೆ. ಕಳ್ಳಬಟ್ಟಿ ಮತ್ತು ಅದನ್ನು ತಯಾರಿಸಲು ಇರಿಸಿದ್ದ ಬೆಲ್ಲದ ಕೊಳೆಯನ್ನು ವಶಕ್ಕೆ ಪಡೆಯಲಾಗಿದೆ.
ಎಲ್ಲೆಲ್ಲಿ ದಾಳಿ ಮಾಡಲಾಗಿದೆ?
ದಾಳಿ 1 – ಹರೀಶಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೆಲ್ಲೂರು ಗ್ರಾಮದ ಬಲವೀಂದ್ರಪ್ಪ ಎಂಬುವವರ ಮನೆ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮನೆಯ ಹಿಂಬದಿಯಲ್ಲಿ ಕಳ್ಳಬಟ್ಟಿ ತಯಾರಿಗೆ ಸಂಗ್ರಹಿಸಿ ಇಟ್ಟಿದ್ದ 110 ಲೀಟರ್ ಬೆಲ್ಲದ ಕೊಳೆಯನ್ನು ವಶಕ್ಕೆ ಪಡೆಯಲಾಗಿದೆ.
ದಾಳಿ 2 – ಪ್ರವೀಣ್ ಎಂಬಾತನ ಮನೆ ಮೇಲೆ ದಾಳಿ ನಡೆಸಿದ್ದು, 20 ಲೀಟರ್ ಬೆಲ್ಲದ ಕೊಳೆ ಮತ್ತು 20 ಲೀಟರ್ ಕಳ್ಳಬಟ್ಟಿ ಸಾರಾಯಿ ಪತ್ತೆಯಾಗಿದೆ. ಅದನ್ನು ವಶಕ್ಕೆ ಪಡೆಯಲಾಗಿದೆ. ಎರಡು ಪ್ರಕರಣದಲ್ಲಿ ಆರೋಪಿಗಳು ಪರಾರಿಯಾಗಿದ್ದಾರೆ. ಅಬಕಾರಿ ಇಲಾಖೆ ಉಪ ಆಯುಕ್ತರ ನಿರ್ದೇಶನದ ಮೇರೆಗೆ ಸಾಗರ ಉಪ ವಿಭಾಗದ ಸಿಬ್ಬಂದಿಗಳು, ಸೊರಬ ವಲಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ದಾಳಿಯಲ್ಲಿ ಪಾಲ್ಗೊಂಡಿದ್ದರು.
ದಾಳಿ 3 – ಸುಳ್ಳೂರು ಗ್ರಾಮದ ಧರ್ಮಪ್ಪ ಎಂಬುವವರ ಮನೆ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದರು. 80 ಲೀಟರ್ ಬೆಲ್ಲದ ಕೊಳೆಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200