
ಶಿವಮೊಗ್ಗ ಲೈವ್.ಕಾಂ | SAGARA NEWS | 9 ಸೆಪ್ಟಂಬರ್ 2020
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಸಾಗರ ತಾಲೂಕಿನ ವಿವಿಧೆಡೆ ಅಬಕಾರಿ ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ, ನೂರು ಲೀಟರ್ ಬೆಲ್ಲದ ಕೊಳೆ ಮತ್ತು ನಾಲ್ಕು ಲೀಟರ್ ಕಳ್ಳಭಟ್ಟಿಯನ್ನು ವಶಕ್ಕೆ ಪಡೆದಿದ್ದಾರೆ.
ತಡಗಳಲೆ ಗ್ರಾಮದಲ್ಲಿ ಕಾರ್ಯಾಚರಣೆ ನಡೆಸಿದ ಅಬಕಾರಿ ಇಲಾಖೆ ಅಧಿಕಾರಿಗಳು ಕನ್ನಪ್ಪ (40) ಎಂಬುವವರ ಮನೆ ಮತ್ತು ಆವರಣದಲ್ಲಿ ದಾಸ್ತಾನು ಮಾಡಿದ್ದ ಬೆಲ್ಲದ ಕೊಳೆ ಮತ್ತು ಕಳ್ಳಭಟ್ಟಿಯನ್ನು ವಶಕ್ಕೆ ಪಡೆದಿದ್ದಾರೆ. ಇದರ ಮೌಲ್ಯದ 11,500 ರಂದು ಅಂದಾಜು ಮಾಡಲಾಗಿದೆ. ಕನ್ನಪ್ಪ ಪರಾರಿಯಾಗಿದ್ದು, ಆತನ ವಿರುದ್ಧ ಪ್ರಕರಣ ದಾಖಲಾಗಿದೆ.
ವಿವಿಧೆಡೆ ಶೋಧ ಕಾರ್ಯ
ಗಾಂಜಾ ನಿರ್ಮೂಲನೆ ಮತ್ತು ಕಳ್ಳಭಟ್ಟಿಗೆ ಬ್ರೇಕ್ ಹಾಕುವ ಸಲುವಾಗಿ ಅಬಕಾರಿ ಇಲಾಖೆ ಅಧಿಕಾರಿಗಳು ಇವತ್ತು ಸಾಗರ ತಾಲೂಕಿನ ವಿವಿಧೆಡೆ ದಿಢಿರ್ ದಾಳಿ ನಡೆಸಿ, ಶೋಧ ಕಾರ್ಯ ನಡೆಸಿದರು. ತಡಗಳಲೆ, ಸೈದೂರು, ಸುಳ್ಳೂರು ಮತ್ತು ಕಣಸೆ ಗ್ರಾಮಗಳಲ್ಲಿ, ವರದಾ ನದಿ ತೀರ, ತೋಟ, ಗದ್ದೆ, ಮೆಕ್ಕೆಜೋಳದ ಹೊಲ ಮತ್ತು ಅರಣ್ಯ ಪ್ರದೇಶಗಳಲ್ಲಿ ಶೋಧ ಕಾರ್ಯ ನಡೆಸಲಾಯಿತು.
ಅಬಕಾರಿ ಇಲಾಖೆ ಉಪ ಆಯುಕ್ತ ಕ್ಯಾಪ್ಟನ್ ಅಜಿತ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಸಾಗರ ವಲಯದ ನಿರೀಕ್ಷಕ ಡಿ.ಎನ್.ಹನುಮಂತಪ್ಪ, ಸಾಗರ ವಲಯ ಮತ್ತು ಜಿಲ್ಲಾ ತಂಡದ ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

https://www.facebook.com/liveshivamogga/videos/314546413130946/?t=1
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






