ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | ಸಾಗರ | 27 ಸೆಪ್ಟೆಂಬರ್ 2019

ತುಮರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಳಸವಳ್ಳಿ ಲಾಂಚ್ ಟೋಲ್ ಮತ್ತು ಪಾರ್ಕಿಂಗ್ ಶುಲ್ಕ ವಸೂಲಿಯಲ್ಲಿ ನಡೆದಿದೆ ಎನ್ನಲಾದ ಭಾರಿ ಅವ್ಯವಹಾರದ ತನಿಖೆಯನ್ನು ಲೋಕಾಯುಕ್ತ ಅಥವಾ ಭ್ರಷ್ಟಾಚಾರ ನಿಗ್ರಹ ದಳಕ್ಕೆ (ಎಸಿಬಿ) ವಹಿಸಬೇಕು ಎಂದು ಸಾಗರ ತಾಲೂಕು ಪಂಚಾಯಿತಿ ಕೆಡಿಪಿ ಸಭೆಯಲ್ಲಿ ನಿರ್ಧರಿಸಲಾಗಿದೆ.

ಸಿಗಂದೂರಿಗೆ ತೆರಳುವ ಪ್ರವಾಸಿ ವಾಹನಗಳಿಗೆ ಶರಾವತಿ ಹಿನ್ನೀರು ಭಾಗದಲ್ಲಿ ಕಳಸವಳ್ಳಿಯಲ್ಲಿ ಟೋಲ್ ಸಂಗ್ರಹಿಸಲಾಗುತ್ತಿತ್ತು. ಇದರಲ್ಲಿ ಭಾರಿ ಅವ್ಯವಹಾರ ನಡೆದಿದ್ದು, ಸರ್ಕಾರಕ್ಕೆ ಸೇರಬೇಕಾದ ಲಕ್ಷಾಂತರ ರೂಪಾಯಿ ಗೋಲ್ಮಾಲ್ ಆಗಿದೆ ಎಂಬ ಆರೋಪವಿದೆ.
ಪ್ರಕರಣದ ತನಿಖೆಗೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸರಿಯಾಗಿ ಸ್ಪಂದಿಸುತ್ತಿಲ್ಲ ಎನ್ನುವ ದೂರುಗಳಿವೆ. ಅವರ ವಿರುದ್ಧವು ಪೊಲೀಸರು ಪ್ರಕರಣ ದಾಖಲಿಸುವ ಅವಕಾಶವಿದೆ. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಶಾಸಕ ಹರತಾಳು ಹಾಲಪ್ಪ ಸಭೆಯಲ್ಲಿ ತಿಳಿಸಿದರು.
ತಪ್ಪಿತಸ್ಥರ ವಿರುದ್ಧ ಶಿಕ್ಷೆ ಆಗಬೇಕು
ಇನ್ನು, ಕಳಸವಳ್ಳಿ ದಡದಲ್ಲಿ ನಕಲಿ ರಶೀದಿ ಮುದ್ರಿಸಿ ಪಾರ್ಕಿಂಗ್ ಶುಲ್ಕ ಮಸೂಲಿ ಮಾಡಿರುವವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಬಿಜೆಪಿ ತುಮರಿ ಘಟಕ ಒತ್ತಾಯಿಸಿದೆ. ಈ ಸಂಬಂಧ ಶಾಸಕ ಹರತಾಳು ಹಾಲಪ್ಪ ಅವರಿಗೆ ಮನವಿ ಸಲ್ಲಿಸಿದೆ.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಟಿ.ಡಿ.ಮೇಘರಾಜ್, ತಾಲೂಕು ಅಧ್ಯಕ್ಷ ಪ್ರಸನ್ನ ಕೆರೆಕೈ, ತುಮರಿ ಗ್ರಾಮ ಪಂಚಾಯಿತಿ ಸದಸ್ಯ ಲೋಕಪಾಲ್ ಜೈನ್, ಬಿ.ಟಿ.ರವೀಂದರ, ಗಿರೀಶ್ ಗೌಡ ಸೇರಿದಂತೆ ಹಲವರು ಇದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | shivamoggalive@gmail.com
LATEST NEWS
- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

About The Editor
ನಿತಿನ್ ಆರ್.ಕೈದೊಟ್ಲು






