ಮಾಜಿ MLAಗೆ ಸಿಗಂದೂರು ದೇಗುಲದಿಂದ ಕಿಕ್ ಬ್ಯಾಕ್ ಆರೋಪ, ಪ್ರಮಾಣಕ್ಕೆ ಬರುವಂತೆ ವಿರೋಧಿಗಳಿಗೆ ಆಗ್ರಹ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

119060214 954258745054036 6933822829653446782 o.jpg? nc cat=105& nc sid=110474& nc ohc=jztG790PCawAX8gAOuD& nc ht=scontent.fixe1 1

ಶಿವಮೊಗ್ಗ ಲೈವ್.ಕಾಂ | SAGARA NEWS | 8 NOVEMBER 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಸಿಗಂದೂರು ದೇಗುಲದ ಧರ್ಮದರ್ಶಿ ರಾಮಪ್ಪ ಮತ್ತು ಪ್ರಧಾನ ಅರ್ಚಕ ಶೇಷಗಿರಿ ಭಟ್ ಅವರಿಂದ ಕಿಕ್ ಬ್ಯಾಕ್ ಪಡೆದಿರುವ ಆರೋಪ ನಿರಾಧಾರ. ಈ ಸಂಬಂಧ ಸಿಗಂದೂರು ದೇವಿ ಸನ್ನಿಧಿಯಲ್ಲಿ ಅವರು ಪ್ರಮಾಣ ಮಾಡಲು ಸಿದ್ದರಿದ್ದಾರೆ ಎಂದು ಬೇಳೂರು ಗೋಪಾಲಕೃಷ್ಣ ಅಭಿಮಾನಿ ಬಳಗದ ನಾಗರಾಜಸ್ವಾಮಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಾಗರಾಜಸ್ವಾಮಿ, ಬೇಳೂರು ಗೋಪಾಲಕೃಷ್ಣ ಅವರಿಗೆ ದೇವಸ್ಥಾನದಿಂದ ಕಿಕ್ ಬ್ಯಾಕ್ ಪಡೆಯುವಂತಹ ದುಸ್ಥಿತಿ ಬಂದಿಲ್ಲ ಎಂದರು.

ಆರೋಪ ಮಾಡಿದವರು ಪ್ರಮಾಣಕ್ಕೆ ಬರ್ತಾರಾ?

ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಕಿಕ್ ಬ್ಯಾಕ್ ಪಡೆದಿದ್ದಾರೆ ಎಂದು ಎಪಿಎಂಸಿ ಅಧ್ಯಕ್ಷ ಚೇತನ್‍ರಾಜ್ ಕಣ್ಣೂರು ಆರೋಪಿಸಿದ್ದಾರೆ. ಈ ವೇಳೆ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ನಗರಾಧ್ಯಕ್ಷ ಕೆ.ಆರ್.ಗಣೇಶ್ ಪ್ರಸಾದ್ ಅವರು ಇದ್ದರು. ಚೇತನ್ ರಾಜ್ ಕಣ್ಣೂರು, ಗಣೇಶ್ ಪ್ರಸಾದ್ ಸೇರಿದಂತೆ ಆರೋಪಿ ಮಾಡಿದವರೆಲ್ಲರು ಸಿಗಂದೂರಿಗೆ ಬಂದು ಪ್ರಮಾಣ ಮಾಡುತ್ತಾರಾ ಎಂದು ನಾಗರಾಜಸ್ವಾಮಿ ಸವಾಲು ಹಾಕಿದರು.

ರಮೇಶ್ ಚಂದ್ರಗುತ್ತಿ, ಯಶವಂತ ಪಣಿ, ಸೋಮಶೇಖರ್ ವೀರಾಪುರ, ಜಗದೀಶ್ ಕುರಡೇಕರ್, ಜಯರಾಮ್ ಸೂರನಗದ್ದೆ, ಕಿರಣ್ ದೊಡ್ಮನಿ, ಸುಧೀರ್ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿದ್ದರು.

122336553 983106055502638 6844548172344119085 n.jpg? nc cat=107& nc sid=110474& nc ohc=JrLgAWzRixQAX9XQ8JM& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment