SHIVAMOGGA LIVE NEWS | 27 JANUARY 2024
SAGARA : ರಾಜ್ಯ ಸರ್ಕಾರ ಪಂಪ ಪ್ರಶಸ್ತಿ ಘೋಷಿಸಿರುವ ಹಿನ್ನೆಲೆ ಸಾಹಿತಿ ನಾ. ಡಿಸೋಜಾ ಅವರನ್ನು ನಾಗರಿಕರ ಪರವಾಗಿ ಶಾಸಕ ಬೇಳೂರು ಗೋಪಾಲಕೃಷ್ಣ ಸನ್ಮಾನಿಸಿದರು. ಮನೆ ಮುಂಭಾಗದಲ್ಲಿ ನಾ. ಡಿಸೋಜಾ ಅವರನ್ನು ಸನ್ಮಾನಿಸಿ ಗೌರವ ಸಲ್ಲಿಸಲಾಯಿತು.
ಈ ಸಂದರ್ಭ ಮಾತನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ, ರಾಜ್ಯ ಸರ್ಕಾರ ನಾ. ಡಿಸೋಜಾ ಅವರಿಗೆ ಪಂಪ ಪ್ರಶಸ್ತಿ ಘೋಷಿಸಿರುವುದು ಸಾಗರ ತಾಲೂಕಿನ ಜನ ಸಂಭ್ರಮ ಪಡುತ್ತಿದಾರೆ. ಈಗಾಗಲೇ ಹಲವು ಪ್ರಶಸ್ತಿಗಳು ಅವರಿಗೆ ಸಂದಿವೆ. ಇದು ಅವರ ಸಾಹಿತ್ಯದ ಹಿರಿಮೆ ಎಂದು ತಿಳಿಸಿದರು.
ಪ್ರಮುಖರಾದ ಚೇತನ್ ರಾಜ್ ಕಣ್ಣೂರು, ಸುರೇಶ್ ಬಾಬು, ದಿನೇಶ್, ಸೋಮಶೇಖರ್ ಲ್ಯಾವಿಗೆರೆ, ಅಶೋಕ ಬೇಳೂರು, ನಗರಸಭೆ ಸದಸ್ಯ ಗಣಪತಿ ಮಂಡಗಳಲೆ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ – ಸವಳಂಗ ರಸ್ತೆ ಸೇತುವೆ, ಕಾಮಗಾರಿ ಬಾಕಿ ಇರುವಾಗಲೆ ವಾಹನ ಸಂಚಾರ ಶುರು, ಅಕ್ಕಪಕ್ಕದ ಬಡಾವಣೆ ವಾಸಿಗಳ ನಿಟ್ಟುಸಿರು
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200