ಶಿವಮೊಗ್ಗ ಲೈವ್.ಕಾಂ |SAGARA NEWS | 24 ಅಕ್ಟೋಬರ್ 2021
ಸಾಗರ ತಾಲೂಕು ತಾಳಗುಪ್ಪದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ವಿದ್ಯುತ್ ಲೈನ್ ಮರಕ್ಕೆ ತಗುಲಿ ಬೆಂಕಿ ಹೊತ್ತುಕೊಂಡಿದೆ. ಸ್ವಲ್ಪ ಹೊತ್ತು ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಸ್ಪೋಟ ಸಂಭವಿಸಿದೆ.
ತಾಳಗುಪ್ಪದ ರಂಗಪ್ಪ ಗುಡ್ಡದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಸ್ಥಳೀಯರು ಘಟನೆಯ ವಿಡಿಯೋ ಚಿತ್ರೀಕರಣ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಏನಿದು ಘಟನೆ? ಸ್ಪೋಟವಾಗಿದ್ದೇಕೆ?
ಬೆಂಗಳೂರು ಸೇರಿದಂತೆ ವಿವಿಧೆಡೆಗೆ ಕೆಪಿಟಿಸಿಎಲ್ ಮೂಲಕ ಇಲ್ಲಿಂದ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ. ಇದಕ್ಕಾಗಿ ಹೈಟೆನ್ಷನ್ ವಯರ್’ಗಳನ್ನು ಹಾಕಲಾಗಿದೆ. ಈ ಹೈಟೆನ್ಷನ್ ವಯರ್’ಗಳಿಗೆ ಅಕೇಷಿಯಾ ಮರಗಳು ತಾಗಿ ಬೆಂಕಿ ಹೊತ್ತುಕೊಂಡಿದೆ ಎಂದು ತಿಳಿದು ಬಂದಿದೆ.
ಕೆಲವು ಹೊತ್ತು ಬೆಂಕಿ ರಭಸವಾಗಿ ಉರಿದಿದೆ. ಬಳಿಕ ಸ್ಪೋಟ ಸಂಭವಿಸಿದೆ. ರಂಗಪ್ಪ ಗುಡ್ಡ ಸುತ್ತಮುತ್ತಲ ಮನೆಗಳ ಜನರು ಇದರಿಂದ ಆತಂಕಕ್ಕೀಡಾಗಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200