30ಕ್ಕೂ ಹೆಚ್ಚು ಜನರಿಗೆ ವಾಂತಿ, ಭೇದಿ, ಆರೋಗ್ಯ ಕೇಂದ್ರಕ್ಕೆ ದೌಡು

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 26 DECEMBER 2022

ಆನಂದಪುರ : 30ಕ್ಕೂ ಹೆಚ್ಚು ಜನರಲ್ಲಿ ವಾಂತಿ, ಭೇದಿ ಕಾಣಿಸಿಕೊಂಡಿದ್ದು, ಸಮುದಾಯ ಆರೋಗ್ಯ ಕೇಂದ್ರಕ್ಕೆ ದೌಡಾಯಿಸಿ ಚಿಕಿತ್ಸೆ ಪಡೆದಿದ್ದಾರೆ. ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. food poison

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

Shimoga Nanjappa hospital

ಆನಂದಪುರ ಸುತ್ತಮುತ್ತ ಹಲವು ಗ್ರಾಮಗಳಲ್ಲಿ ಮಹಿಳೆಯರು, ಮಕ್ಕಳು ಸೇರಿ 30ಕ್ಕೂ ಹೆಚ್ಚು ಜನರಲ್ಲಿ ವಾಂತಿ, ಭೇದಿ ಕಾಣಿಸಿಕೊಂಡಿದೆ. ಜನರು ದಿಢೀರ್ ಅಸ್ವಸ್ಥಗೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ. food poison

ಇದನ್ನೂ ಓದಿ – ಮಹಿಳೆಯರೆ ಎಚ್ಚರ, ಹೀಗೂ ಕಳ್ಳತನವಾಗಬಹುದು ಲಕ್ಷಾಂತರ ಮೌಲ್ಯದ ನಿಮ್ಮ ಚಿನ್ನಾಭರಣ

ಬೆಳಗ್ಗೆಯಿಂದ ಹಲವರು ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೇಂದ್ರದ ವೈದ್ಯ ಡಾ.ಕಾಂತೇಶ್ ಅವರ ನೇತೃತ್ವದಲ್ಲಿ ಚಿಕಿತ್ಸೆ ನಡೆಯುತ್ತಿದೆ. ಜನರು ಆತಂಕಪಡುವ ಅಗತ್ಯವಿಲ್ಲ. ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಶುದ್ಧವಾದ ನೀರು ಕುಡಿಯಬೇಕು. ಫುಡ್ ಪಾಯ್ಸನ್ ಆಗಿರುವ ಸಾದ್ಯತೆ ಇದೆ ಎಂದು ವೈದ್ಯರು ತಿಳಿಸಿದ್ದಾರೆ.

ಚಿಕಿತ್ಸೆ ಪಡೆದು ಹಲವರು ಮನೆಗೆ ಮರಳಿದ್ದಾರೆ. ವೈದ್ಯರು ವಿಶ್ರಾಂತಿಗೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

Shimoga Nanjappa hospital

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment