ಅರಣ್ಯಾಧಿಕಾರಿಗಳಿಗೆ ಎಂಎಲ್ಎ ಕ್ಲಾಸ್, ರೈತರ ಮಕ್ಕಳಿಗೆ ಸ್ಲೇಟ್ ಹಿಡಿಸಿದ್ದಕ್ಕೆ ಆಕ್ರೋಶ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS

ಸಾಗರ |  ಮಲೆನಾಡಿನಲ್ಲಿ ಕಾಡು ಉಳಿಯಲು ರೈತರು ಕಾರಣವೆ ಹೊರತು ಅರಣ್ಯ (FOREST) ಇಲಾಖೆಯಲ್ಲ. ಕಾಡು ಉಳಿಸಿದ ರೈತರ ಕೈಗೆ ಸ್ಲೇಟ್ ನೀಡಿ, ಭಯೋತ್ಪಾದಕರ ಹಾಗೆ ಫೋಟೊ ಹೊಡೆಸಿ ಮಾನಸಿಕ ಮತ್ತು ದೈಹಿಕ ಹಿಂಸೆ ನೀಡುತ್ತಿರುವುದು ಸರಿಯಲ್ಲ ಎಂದು ಸಾಗರ ಶಾಸಕ ಹರತಾಳು ಹಾಲಪ್ಪ ಆಕ್ರೋಶ ವ್ಯಕ್ತಪಡಿಸಿದರು.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

Shimoga Nanjappa Hospital

ಸಾಗರದ ಸಾಮರ್ಥ್ಯ ಸೌಧದಲ್ಲಿ ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಶಾಸಕ ಹರತಾಳು ಹಾಲಪ್ಪ ಅವರು, ಅರಣ್ಯ ಇಲಾಖೆ ರೈತರ ಮಕ್ಕಳ ವಿರುದ್ಧ ಇಲ್ಲಸಲ್ಲದ ಕೇಸ್ ದಾಖಲು ಮಾಡುತ್ತಿರುವುದು ತಮ್ಮ ಗಮನಕ್ಕೆ ಬಂದಿದೆ. ಇದು ಸರಿಯಾದ ಕ್ರಮವಲ್ಲ ಎಂದು ಆಕ್ರೋಶ ವ್ಯಕ್ತoಪಡಿಸಿದರು.

ಅರಣ್ಯ ಇಲಾಖೆ ಅಡ್ಡಿಪಡಿಸಬಾರದು

ರಸ್ತೆ, ವಿದ್ಯುತ್ ಯೋಜನೆಗಳಿಗೆ ಅರಣ್ಯ (FOREST) ಇಲಾಖೆ ಅಡ್ಡಿಪಡಿಸಬಾರದು. 30 ಮರ ಕಡಿದರೆ 300 ಮರಗಳನ್ನು ನೆಡುವ ಹಾಗೆ ಸೀಡ್ ಬಾಲ್, ಬೀಜಗಳನ್ನು ಕೊಟ್ಟು ಅವರನ್ನು ಕೆಲಸಕ್ಕೆ ಹಚ್ಚಬೇಕು. ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಕೆಡಿಪಿ ನಿರ್ಣಯ ತೆಗೆದುಕೊಳ್ಳಬೇಕು ಎಂದು ಶಾಸಕ ಹಾಲಪ್ಪ ಅವರು ಸೂಚಿಸಿದರು.

ರೈತರನ್ನು ದೇಶದ್ರೋಹಿಗಳ ಹಾಗೆ ಚಿತ್ರಿಸಿದ್ದು ಸರಿಯಾದ ಕ್ರಮವಲ್ಲ. ಅರಣ್ಯ ಇಲಾಖೆ ಅಧಿಕಾರಿಗಳು ಅಮಾಯಕರಿಗೆ ಹಿಂಸೆ ನೀಡುತ್ತಾರೆ. ಹೆಣ್ಣು ಮಕ್ಕಳಿಗೆ ಅವಾಚ್ಯವಾಗಿ ನಿಂದಿಸುತ್ತಾರೆ. ಮರ ಕಡಿದ ವಿಚಾರದಲ್ಲಿ ರೈತರ ವಿರುದ್ಧದ ಪ್ರಕರಣವನ್ನು ಪ್ರತ್ಯೇಕ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಬೇಕು.ಮಂಜಯ್ಯ ಜೈನ್, ಕೆಡಿಪಿ ಸದಸ್ಯ

ಕೆಟ್ಟ ಹೆಸರು ತರಲು ಪ್ರಯತ್ನ

Haratalu-Halappaತುಮರಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಈಗ 4 ಆಂಬುಲೆನ್ಸ್’ಗಳಿವೆ. ಆದರೆ 108 ಆಂಬುಲೆನ್ಸ್ ಸೇವೆ ಇಲ್ಲ ಎಂದು ಆರೋಪಿಸಿ, ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಪ್ರಯತ್ನ ನಡೆಯಿತು. ತಾಲೂಕು ಆರೋಗ್ಯಾಧಿಕಾರಿ ಅವರು ಸ್ಥಳೀಯರಿಗೆ ಸರಿಯಾದ ಮಾಹಿತಿ ನೀಡುವಲ್ಲಿ ವಿಫಲವಾಗಿದ್ದಾರೆ ಎಂದು ಶಾಸಕ ಹರತಾಳು ಹಾಲಪ್ಪ ಬೇಸರ ವ್ಯಕ್ತಪಡಿಸಿದರು.

ತಾಲೂಕು ಪಂಚಾಯಿತಿ ಆಡಳಿತಾಧಿಕಾರಿ ಮಲ್ಲಪ್ಪ ಕೆ. ತೊದಲಬಾವಿ, ತಾಲೂಕ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪುಷ್ಪಾ ಎಂ.ಕಮ್ಮಾರ್, ಕೆಡಿಪಿ ಸದಸ್ಯರಾದ ಗೌತಮ ಎಸ್, ಪಶುಪತಿ, ದೇವೇಂದ್ರಪ್ಪ, ಸುವರ್ಣ ಟೀಕಪ್ಪ, ಈಶ್ವರ ಡಿ.ಹೆಚ್, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ – ಮನೆ ಮನೆಗೂ ತಿರಂಗ, ಸಾಗರದಲ್ಲಿ ರೆಡಿಯಾಗ್ತಿದೆ 50 ಸಾವಿರ ರಾಷ್ಟ್ರಧ್ವಜ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment