SHIVAMOGGA LIVE NEWS | 12 ಮಾರ್ಚ್ 2022
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಕೆರೆ ಹಬ್ಬದ ಅಂಗವಾಗಿ ಇವತ್ತು ಸಾಗರದ ಗಣಪತಿ ಕೆರೆಯ ಸ್ವಚ್ಛತಾ ಕಾರ್ಯ ನಡೆಸಲಾಯಿತು. ಶಾಸಕ ಹರತಾಳು ಹಾಲಪ್ಪ ನೇತೃತ್ವದಲ್ಲಿ ದೊಡ್ಡ ಸಂಖ್ಯೆಯ ಸ್ವಯಂ ಸೇವಕರು ಸ್ವಚ್ಛತೆಯಲ್ಲಿ ಭಾಗವಹಿಸಿದ್ದರು.
ಗಣಪತಿ ಕೆರೆಯ ದಂಡೆಯನ್ನು ಜನರು ಸ್ವಚ್ಛಗೊಳಿಸಿದರು. ವಿವಿಧ ಸಂಘಟನೆಗಳು, ನಗರ ಸಭೆಯ ಪೌರ ಕಾರ್ಮಿಕರು, ಜನರು ಸ್ವಯಂ ಪ್ರೇರಿತವಾಗಿ ಬಂದು ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡಿದರು.
ಕಸ ತೆಗೆದು ಮಾದರಿಯಾದ ಶಾಸಕ
ಸ್ವಯಂ ಸೇವಕರೊಂದಿಗೆ ಕೈ ಜೋಡಿಸಿದ ಶಾಸಕ ಹರತಾಳು ಹಾಲಪ್ಪ, ತಾವೆ ಕಸ ತೆಗೆದು ಉಳಿದವರಿಗೆ ಮಾದರಿಯಾದರು. ಈ ವೇಳೆ ಮಾತನಾಡಿದ ಶಾಸಕ ಹರತಾಳು ಹಾಲಪ್ಪ ಅವರು, ‘ಎರಡು ವರ್ಷದಿಂದ ಕೆರೆ ಹಬ್ಬ ನಡೆಸುತ್ತಿದ್ದೇವೆ. ಸ್ವಚ್ಛತೆ ಕುರಿತು ಜಾಗೃತಿ ಮೂಡಿಸುವುದು, ಪ್ಲಾಸ್ಟಿಕ್ ಮುಕ್ತಗೊಳಿಸುವುದು ಕೆರೆ ಹಬ್ಬದ ಉದ್ದೇಶ. ಬೆಳಗ್ಗೆ ಕೆರೆ ಸ್ವಚ್ಛತೆ ಮಾಡುತ್ತೇವೆ. ಸಂಜೆ ವೇಳೆಗೆ ಸಾಂಸ್ಕೃತಿಕ ಕಾರ್ಯಕ್ರಮ, ಆಹಾರ ಮೇಳ, ಕಬಡಿ ಪಂದ್ಯಾವಳಿ ಇರಲಿದೆ’ ಎಂದರು.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






