| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಸಾಗರ : ಇತಿಹಾಸ ಪ್ರಸಿದ್ಧ ಶ್ರೀ ಮಹಾಗಣಪತಿ ರಥೋತ್ಸವವು (Ratotsava) ವಿಜೃಂಭಣೆಯಿಂದ ನಡೆಯಿತು. ಸಾವಿರಾರು ಭಕ್ತರು ರಥೋತ್ಸವ ಕಣ್ತುಂಬಿಕೊಂಡು ದೇವರಿಗೆ ಪ್ರಾರ್ಥನೆ ಸಲ್ಲಿಸಿದರು.
ಗಣಪತಿಯ ವಿಗ್ರಹವನ್ನು ಅಲಂಕೃತ ರಥದಲ್ಲಿ (Ratotsava) ಕುಳ್ಳಿರಿಸಿ ಪೂಜೆ ಸಲ್ಲಿಸಲಾಯಿತು. ಮಂಗಳವಾರ ಬೆಳಗ್ಗೆ 9.45 ರಿಂದ ಬೆಳಗ್ಗೆ 10.05ರವರೆಗೆ ಭಕ್ತರು ಹರ್ಷೋದ್ಗಾರಗಳ ನಡುವೆ ರಥವನ್ನು ಎಳೆದರು. ಇಷ್ಟಾರ್ಥಗಳ ಈಡೇರಿಕೆಗೆ ಭಕ್ತರು ರಥದತ್ತ ಬಾಳೆಹಣ್ಣು ತೂರಿದರು.
ರಾತ್ರಿ ರಥದ ರಾಜಬೀದಿ ಉತ್ಸವ ನಡೆಯಿತು. ಏ.2ರಂದು ಕುಂಕುಮೋತ್ಸವ, ಅವಭೃತ, ಅಂಕುರಾರ್ಪಣೆ, 3ರಂದು ಗಣಪತಿ ಹವನ, 4ರಂದು ಸಾರ್ವತ್ರಿಕ ಗಣಹೋಮ, ಏ.2ರಿಂದ 5 ದಿನ ಸಂಜೆ 6ರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಜಿ.ಕೆ.ಪ್ರಮೀಳಾಕುಮಾರಿ ತಿಳಿಸಿದರು.
![]()
ಹಿಂದಿನ ವರ್ಷಗಳಿಗಿಂತಲು ಹೆಚ್ಚಿನ ಸಂಖ್ಯೆಯ ಭಕ್ತರು ಈ ಬಾರಿಯ ರಥೋತ್ಸವದಲ್ಲಿ ಪಾಲ್ಗೊಂಡಿದ್ದಾರೆ. ಇಡೀ ದೇಶ ಸುಭಿಕ್ಷವಾಗಿರಲಿ ಎಂದು ಪ್ರಾರ್ಥಿಸಿ ಪೂಜೆ ಸಲ್ಲಿಸಲಾಗಿದೆ. 2 ಕೋಟಿ ರೂ. ವೆಚ್ಚದಲ್ಲಿ ಗಣಪತಿ ದೇವಸ್ಥಾನದ ಅಭಿವೃದ್ಧಿಗೆ ನೀಲನಕ್ಷೆ ಸಿದ್ಧಪಡಿಸಲಾಗಿದೆ. ಜಾತ್ರೆ ನಂತರ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವ ಉದ್ದೇಶವಿದೆ.
– ಬೇಳೂರು ಗೋಪಾಲಕೃಷ್ಣ, ಶಾಸಕ
ನಗರಸಭೆ ಅಧ್ಯಕ್ಷೆ ಮೈತ್ರಿ ಪಾಟೀಲ್, ಉಪಾಧ್ಯಕ್ಷೆ ಸವಿತಾ ವಾಸು, ತಹಶೀಲ್ದಾರ್ ಚಂದ್ರಶೇಖರ್ ನಾಯ್ಕ, ರಥೋತ್ಸವ ಸಮಿತಿ ಪ್ರಧಾನ ಸಂಚಾಲಕ ಟಿ.ವಿ.ಪಾಂಡುರಂಗ ಸೇರಿ ಹಲವರು ಇದ್ದರು.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಬಿಗಿ ಬಂದೋಬಸ್ತ್ನಲ್ಲಿ ವಿವಾದಿತ ಬೇಲಿ ತೆರವು, ಅಂಗಡಿ ಮುಂಗಟ್ಟು ಬಂದ್
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಕೋಟೆ ದೇವಸ್ಥಾನದಲ್ಲಿ 30 ದಿನ ಸೀತಾಕಲ್ಯಾಣ ಶತಮಾನೋತ್ಸವ, ಏನೇನೆಲ್ಲ ಕಾರ್ಯಕ್ರಮ ಇರಲಿದೆ?
- BREAKING NEWS – ಶಿವಮೊಗ್ಗದ ಖ್ಯಾತ ಡಾಕ್ಟರ್ ಮತ್ತು ಪುತ್ರ ನೇಣಿಗೆ ಶರಣು
- ಬಿಸ್ಕತ್ತು, ಕೇಕ್, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
![]()