ಸಾಗರದಲ್ಲಿ ಮಹಾಗಣಪತಿಯ ವೈಭವದ ರಥೋತ್ಸವ, ಎಷ್ಟು ಜನ ಭಾಗವಹಿಸಿದ್ದರು? ಏನೆಲ್ಲ ಕಾರ್ಯಕ್ರಮ ಇರುತ್ತೆ?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಸಾಗರ : ಇತಿಹಾಸ ಪ್ರಸಿದ್ಧ ಶ್ರೀ ಮಹಾಗಣಪತಿ ರಥೋತ್ಸವವು (Ratotsava) ವಿಜೃಂಭಣೆಯಿಂದ ನಡೆಯಿತು. ಸಾವಿರಾರು ಭಕ್ತರು ರಥೋತ್ಸವ ಕಣ್ತುಂಬಿಕೊಂಡು ದೇವರಿಗೆ ಪ್ರಾರ್ಥನೆ ಸಲ್ಲಿಸಿದರು.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಗಣಪತಿಯ ವಿಗ್ರಹವನ್ನು ಅಲಂಕೃತ ರಥದಲ್ಲಿ (Ratotsava) ಕುಳ್ಳಿರಿಸಿ ಪೂಜೆ ಸಲ್ಲಿಸಲಾಯಿತು. ಮಂಗಳವಾರ ಬೆಳಗ್ಗೆ 9.45 ರಿಂದ ಬೆಳಗ್ಗೆ 10.05ರವರೆಗೆ ಭಕ್ತರು ಹರ್ಷೋದ್ಗಾರಗಳ ನಡುವೆ ರಥವನ್ನು ಎಳೆದರು. ಇಷ್ಟಾರ್ಥಗಳ ಈಡೇರಿಕೆಗೆ ಭಕ್ತರು ರಥದತ್ತ ಬಾಳೆಹಣ್ಣು ತೂರಿದರು.

ರಾತ್ರಿ ರಥದ ರಾಜಬೀದಿ ಉತ್ಸವ ನಡೆಯಿತು. ಏ.2ರಂದು ಕುಂಕುಮೋತ್ಸವ, ಅವಭೃತ, ಅಂಕುರಾರ್ಪಣೆ, 3ರಂದು ಗಣಪತಿ ಹವನ, 4ರಂದು ಸಾರ್ವತ್ರಿಕ ಗಣಹೋಮ, ಏ.2ರಿಂದ 5 ದಿನ ಸಂಜೆ 6ರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಜಿ.ಕೆ.ಪ್ರಮೀಳಾಕುಮಾರಿ ತಿಳಿಸಿದರು.

mahaganapathi-ratotsava-in-Sagara-city

ಹಿಂದಿನ ವರ್ಷಗಳಿಗಿಂತಲು ಹೆಚ್ಚಿನ ಸಂಖ್ಯೆಯ ಭಕ್ತರು ಈ ಬಾರಿಯ ರಥೋತ್ಸವದಲ್ಲಿ ಪಾಲ್ಗೊಂಡಿದ್ದಾರೆ. ಇಡೀ ದೇಶ ಸುಭಿಕ್ಷವಾಗಿರಲಿ ಎಂದು ಪ್ರಾರ್ಥಿಸಿ ಪೂಜೆ ಸಲ್ಲಿಸಲಾಗಿದೆ. 2 ಕೋಟಿ ರೂ. ವೆಚ್ಚದಲ್ಲಿ ಗಣಪತಿ ದೇವಸ್ಥಾನದ ಅಭಿವೃದ್ಧಿಗೆ ನೀಲನಕ್ಷೆ ಸಿದ್ಧಪಡಿಸಲಾಗಿದೆ. ಜಾತ್ರೆ ನಂತರ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವ ಉದ್ದೇಶವಿದೆ.

– ಬೇಳೂರು ಗೋಪಾಲಕೃಷ್ಣ, ಶಾಸಕ

ನಗರಸಭೆ ಅಧ್ಯಕ್ಷೆ ಮೈತ್ರಿ ಪಾಟೀಲ್, ಉಪಾಧ್ಯಕ್ಷೆ ಸವಿತಾ ವಾಸು, ತಹಶೀಲ್ದಾರ್ ಚಂದ್ರಶೇಖರ್ ನಾಯ್ಕ, ರಥೋತ್ಸವ ಸಮಿತಿ ಪ್ರಧಾನ ಸಂಚಾಲಕ ಟಿ.ವಿ.ಪಾಂಡುರಂಗ ಸೇರಿ ಹಲವರು ಇದ್ದರು.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ಇದನ್ನೂ ಓದಿ » ಶಿವಮೊಗ್ಗದಲ್ಲಿ ಬಿಗಿ ಬಂದೋಬಸ್ತ್‌ನಲ್ಲಿ ವಿವಾದಿತ ಬೇಲಿ ತೆರವು, ಅಂಗಡಿ ಮುಂಗಟ್ಟು ಬಂದ್

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment