ಶಿವಮೊಗ್ಗ ಲೈವ್.ಕಾಂ | SAGARA NEWS | 7 ಜುಲೈ 2021
ಯುವಕರ ಸಮಯ ಪ್ರಜ್ಞೆಯಿಂದಾಗಿ ಸಾಗರದಲ್ಲಿ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿದಂತಾಗಿದೆ. ಮನೆಯೊಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿದ್ದು, ಮನೆಯಲ್ಲಿದ್ದವರನ್ನು ರಕ್ಷಣೆ ಮಾಡಿದ ಯುವಕರು, ಅನಿಲ ಸೋರಿಕೆಯನ್ನು ತಡೆದಿದ್ದಾರೆ.
ಏನಿದು ಘಟನೆ?
ಸಾಗರ ಪಟ್ಟಣದ ಎಸ್.ಎನ್.ನಗರದ ಬಾಳೆಕಾಯಿ ನಾಗರಾಜ್ ಅವರ ಮನೆಯಲ್ಲಿ ಅಡುಗೆ ಅನಿಲ ಸೋರಿಕೆಯಾಗಿದೆ. ಇದರಿಂದ ಮನೆಯಲ್ಲಿದ್ದವರು ಆತಂಕಕ್ಕೀಡಾಗಿದ್ದರು. ಅಕ್ಕಪಕ್ಕದ ಮನೆಗಳಲ್ಲೂ ಭೀತಿ ಸೃಷ್ಟಿಯಾಗಿತ್ತು.
ವಿಚಾರ ತಿಳಿಯುತ್ತಿದ್ದಂತೆ ನಾಗರಾಜ್, ವಿನೋದ್ ರಾಜ್, ಪ್ರಕಾಶ್, ರವಿ, ಸ್ಥಳೀಯ ಬೀಟ್ ಪೊಲೀಸ್ ಸುರೇಂದ್ರ ಅವರು ಮನೆಯವರನ್ನೆಲ್ಲ ಸುರಕ್ಷಿತವಾಗಿ ಹೊರಗೆ ಕರೆದೊಯ್ದಿದ್ದಾರೆ. ರವಿ ಅವರು ಗ್ಯಾಸ್ ಮತ್ತಷ್ಟು ಲೀಕ್ ಆಗುವುದನ್ನು ತಪ್ಪಿಸಿದ್ದಾರೆ. ನೆರೆಹೊರೆಯವರನ್ನು ಸುರಕ್ಷಿತಗೊಳಿಸಿದ್ದಾರೆ.
ಈ ವೇಳೆಗಾಗಲೆ ಮಾಹಿತಿ ತಿಳಿದು ಅಗ್ನಿಶಾಮಕ ಸಿಬ್ಬಂದಿಗೆ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಯುವಕರ ಸಮಯ ಪ್ರಜ್ಞೆಗೆ ಶಹಬ್ಬಾಸ್ ತಿಳಿಸಿದ್ದಾರೆ.
ಫೋಟೊ, ವರದಿ : ಸುದ್ದಿಮನೆ, ಸಾಗರ
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200