ಸಾಗರ: ನಗರದ ಕೆಎಸ್ಆರ್ಟಿಸಿ ನಿಲ್ದಾಣದಲ್ಲಿ ಬಸ್ ಹತ್ತುವ ಸಂದರ್ಭ ಮಹಿಳೆಯೊಬ್ಬರ ಬ್ಯಾಗ್ನಿಂದ ಸುಮಾರು 12 ಗ್ರಾಂ ತೂಕದ ಬಂಗಾರದ ಚೈನ್ (gold chain) ಕಳುವಾಗಿರುವ ಘಟನೆ ನಡೆದಿದೆ.
ಸೊರಬ ತಾಲೂಕಿನ ಜಡೆ ಗ್ರಾಮದ ಜಯಮ್ಮ ಎಂಬುವವರು ಸಾಗರದ ಜಂಬಗಾರಿನಲ್ಲಿರುವ ತಮ್ಮ ಸಂಬಂಧಿಕರ ಮನೆಗೆ ಮಾರಿಕಾಂಬ ಜಾತ್ರೆಗೆ ಬಂದಿದ್ದರು. ಜಾತ್ರೆ ಮುಗಿಸಿ ವಾಪಸ್ ಊರಿಗೆ ಹೋಗಲು ಸಾಗರ ಕೆಎಸ್ಆರ್ಟಿಸಿ ಬಸ್ ನಿಲ್ದಾಣಕ್ಕೆ ಬಂದಿದ್ದರು. ಈ ಸಂದರ್ಭ ಸುಮಾರು 12 ಗ್ರಾಂ ತೂಕದ ಬಂಗಾರದ ಗಣಪತಿ ಡಾಲರ್ ಇದ್ದ ಚೈನ್ ಅನ್ನು ವ್ಯಾನಿಟಿ ಬ್ಯಾಗ್ನಲ್ಲಿ ಇಟ್ಟುಕೊಂಡಿದ್ದರು.
ಇದನ್ನೂ ಓದಿ – ಇನ್ಮುಂದೆ ಹೊಸ ಲುಕ್ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಶಿವಮೊಗ್ಗ ಪೊಲೀಸ್, ಏನಿದು?
ಸೊರಬ – ಹಾನಗಲ್ ಮಾರ್ಗದ ಬಸ್ ಬಂದಾಗ ರಶ್ ಹೆಚ್ಚಾಗಿತ್ತು. ಜಯಮ್ಮ ಅವರು ನೂಕುನುಗ್ಗಲಿನಲ್ಲಿ ಬಸ್ಸಿನ ಹಿಂದಿನ ಬಾಗಿಲಿನಿಂದ ಹತ್ತಿ ಸೀಟಿನಲ್ಲಿ ಕುಳಿತಿದ್ದರು. ಬಳಿಕ ಬ್ಯಾಗ್ ಪರಿಶೀಲಿಸಿದಾಗ ಬಂಗಾರದ ಚೈನ್ ನಾಪತ್ತೆಯಾಗಿರುವುದು ಗೊತ್ತಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಬಂಗಾರದ ಚೈನ್ ಸುಮಾರು 10 ವರ್ಷ ಹಿಂದೆ ಮಾಡಿಸಿದ್ದಾಗಿದ್ದು, ಅಂದಿನ ಮೌಲ್ಯ ಸುಮಾರು ₹48,000 ಎಂದು ತಿಳಿಸಲಾಗಿದೆ. ಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LATEST NEWS
- ಬೈಕ್ಗೆ ಡಿಕ್ಕಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಗುದ್ದಿ ಪಲ್ಟಿಯಾದ ಖಾಸಗಿ ಬಸ್

- ತಾಳಗುಪ್ಪ ಇಂಟರ್ಸಿಟಿ ರೈಲು, ಬೆಂಗಳೂರು ಮಹಿಳೆಯ ದೂರು, ದಾವಣಗೆರೆಯ ವ್ಯಕ್ತಿ ಅರೆಸ್ಟ್, ಆಗಿದ್ದೇನು?

- ಶಿವಮೊಗ್ಗದಲ್ಲಿ ರಸ್ತೆ ಬದಿಯ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ

- ಮೈತ್ರಾದೇವಿ ಯಡಿಯೂರಪ್ಪ ಸ್ಮರಣಾರ್ಥ ಚಿನ್ನದ ಪದಕ

- ಶಿವಮೊಗ್ಗ, ಹೊಸನಗರದ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್ ಇರಲ್ಲ

About The Editor
ನಿತಿನ್ ಆರ್.ಕೈದೊಟ್ಲು

